Bhatkal :ಪುರಸಭಾ ಮುಖ್ಯಾಧಿಕಾರಿ ಲೋಕಾಯುಕ್ತ ಬಲೆಗೆ ಆತ ಪಡೆದಿದ್ದ ಹಣವೆಷ್ಟು ಗೊತ್ತಾ?
Bhatlal :-ಲಂಚ ಸ್ವೀಕರಿಸುತ್ತಿರುವ ವೇಳೆ ಭಟ್ಕಳ ಪುರಸಭೆ ಮುಖ್ಯಾಧಿಕಾರಿ ನೀಲಕಂಠ ಮೇಸ್ತಾ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
01:57 PM Nov 15, 2024 IST
|
ಶುಭಸಾಗರ್
Repoting- manju
Advertisement
Bhatlal :-ಲಂಚ ಸ್ವೀಕರಿಸುತ್ತಿರುವ ವೇಳೆ ಭಟ್ಕಳ ಪುರಸಭೆ ಮುಖ್ಯಾಧಿಕಾರಿ ನೀಲಕಂಠ ಮೇಸ್ತಾ ಲೋಕಾಯುಕ್ತ (Lokayuktha)ಬಲೆಗೆ ಬಿದ್ದಿದ್ದಾರೆ.
ಮೊಹ್ಮದ ಇದ್ರಿಸ್ ಮೋಹತೇಷಾಮ್ ಎನ್ನುವವರ ನೀಡಿದ ದೂರಿನ ಆಧಾರದ ಮೇಲೆ ಶುಕ್ರವಾರ ಕಾರವಾರ ಲೋಕಾಯುಕ್ತ ಎಸ್ಪಿ ಕುಮಾರ ಚಂದ್ರ ಹಾಗೂ ಪ್ರಭಾರಿ ಲೋಕಾಯುಕ್ತ ಡಿವೈಎಸ್ಪಿ ವಿನಾಯಕ ಬಿಲ್ಲವ ನೇತೃತ್ವದಲ್ಲಿ ದಾಳಿ ಮಾಡಲಾಗಿದೆ.
ಇದನ್ನೂ ಓದಿ:-Bhatkal :ಭಟ್ಕಳ ಪೊಲೀಸರ ಭರ್ಜರಿ ಕಾರ್ಯಾಚರಣೆ 9 kg ಗಾಂಜಾ ವಶಕ್ಕೆ
Advertisement
ಒಳಚರಂಡಿಗೆ ಯೋಜನೆ ಕಾಮಗಾರಿ ಸಂಬಂಧ ಲಂಚ ಸ್ವೀಕರಿಸುತ್ತಿದ್ದರು.
ದೂರುದಾರ ನೀಡಿದ ಹೇಳಿಕೆ ಪ್ರಕಾರ ನೀಲಕಂಠ ಮೇಸ್ತಾ ಒಳಚರಂಡಿ ಜೋಡಣೆಗೆ 3 ಲಕ್ಷ ಲಂಚ ಕೇಳಿದ್ದರು. ಈಗಾಗಲೇ 2 ಲಕ್ಷ ಹಣವನ್ನು ನೀಡಿದ್ದರು. ಶುಕ್ರವಾರ 50 ಸಾವಿರ ಹಣ ನೀಡಿದ್ದೇನೆ ಮತ್ತು ಇನ್ನು 50 ಸಾವಿರ ಕೊಡುವುದು ಬಾಕಿ ಇತ್ತು ಎಂದು ತಿಳಿಸಿದ್ದಾರೆ.
ದಾಳಿಯಲ್ಲಿ ಪ್ರಸಾದ ಪನ್ನೆಕರ ಹಾಗೂ 20 ಜನ ಪಿ.ಐ ಸಿಬ್ಬಂದಿಗಳು ಭಾಗಿಯಾಗಿದ್ದರು.
Advertisement
Next Article
Advertisement