Shirur|ಜಗನ್ನಾಥ್ ಪುತ್ರಿಗೆ ಕೈಗಾದಲ್ಲಿ ಉದ್ಯೋಗ ಕೊಡಿಸಿದ ಕೇಂದ್ರ ಸಚಿವ ಹೆಚ್.ಡಿ.ಕೆ
Ankola :- ಉತ್ತರ ಕನ್ನಡ ಜಿಲ್ಲೆಯ ಅಂಕೋಲ ತಾಲೂಕಿನ ಶಿರೂರು (shirur) ಗುಡ್ಡ ಕುಸಿತ ಪ್ರಕರಣದಲ್ಲಿ ಕಾಣೆಯಾದ ಜಗನ್ನಾಥ ನಾಯ್ಕ
08:00 PM Sep 10, 2024 IST | ಶುಭಸಾಗರ್
Ankola :- ಉತ್ತರ ಕನ್ನಡ ಜಿಲ್ಲೆಯ ಅಂಕೋಲ ತಾಲೂಕಿನ ಶಿರೂರು (shirur) ಗುಡ್ಡ ಕುಸಿತ ಪ್ರಕರಣದಲ್ಲಿ ಕಾಣೆಯಾದ ಜಗನ್ನಾಥ ನಾಯ್ಕ ಅವರ ಪುತ್ರಿ ಕೃತಿಕಾಗೆ ಕೇಂದ್ರ ಸಚಿವ ಹೆಚ್. ಡಿ ಕುಮಾರಸ್ವಾಮಿ ರವರು ಕೈಗಾ ಅಣು ವಿದ್ಯುತ್ ಸ್ಥಾವರದಲ್ಲಿ ಕಾರ್ಯನಿರ್ವಹಿಸುವ ಬಿ.ಎಚ್.ಇ.ಎಲ್ ಕಂಪನಿಯಲ್ಲಿ ಉದ್ಯೋಗ ಅವಕಾಶ ಕಲ್ಪಿಸಿದ್ದಾರೆ.
Advertisement
ಈ ಕುರಿತು ದೂರವಾಣಿ ಮೂಲಕ ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿರವರು ಕೃತಿಕಾಗೆ ಕಾತರಿ ಪಡಿಸಿದ್ದಾರೆ.
ಇನ್ನೋರ್ವ ಪುತ್ರಿ ಪಲ್ಲವಿ ನಾಯ್ಕ ಗೆ ಕಳೆದವಾರ ಪ್ರವಾಸೋದ್ಯಮ ಇಲಾಖೆಯಲ್ಲಿ ಹೊರಗುತ್ತಿಗೆ ಆಧಾರದ ಉದ್ಯೋಗ ನೀಡಲಾಗಿತ್ತು.
ಇದನ್ನೂ ಓದಿ:-Arecanut price|ಅಡಿಕೆದರ 10 september 2024
ಕೇಂದ್ರ ಸಚಿವರು ಶಿರೂರು ಗುಡ್ಡಕುಸಿದ ಸಂದರ್ಭದಲ್ಲಿ ವೀಕ್ಷಣೆಗೆ ಆಗಮಿಸಿದಾಗ ಜಗನ್ನಾಥ್ ಮಕ್ಕಳಿಗೆ ಉದ್ಯೋಗದ ಭರವಸೆ ನೀಡಿದ್ದು ಇದೀಗ ಈಡೇರಿಸಿದ್ದಾರೆ.
Advertisement