ಪ್ರಮುಖ ಸುದ್ದಿಮುಖಪುಟLocal storyರಾಜ್ಯರಾಷ್ಟ್ರೀಯಅಂತರರಾಷ್ಟ್ರೀಯCrime newsಮನೋರಂಜನೆ
Advertisement

Darshan bail case| ನಟ ದರ್ಶನ್ ,ಪವಿತ್ರಾ ಗೌಡಾಗೆ ಜಾಮೀನು ನಿರಾಕರಣೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ1 ಆರೋಪಿ ಆಗಿರುವ ಪವಿತ್ರಾ ಗೌಡ ಹಾಗೂ ಎ2 ಆರೋಪಿಯಾಗಿರುವ ದರ್ಶನ್​ ಅವರ ಜಾಮೀನು ಅರ್ಜಿ ವಜಾ ಗೊಂಡಿದೆ.
07:20 PM Oct 14, 2024 IST | ಶುಭಸಾಗರ್

ಬೆಂಗಳೂರು :-ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ1 ಆರೋಪಿ ಆಗಿರುವ ಪವಿತ್ರಾ ಗೌಡ ಹಾಗೂ
ಎ2 ಆರೋಪಿಯಾಗಿರುವ ದರ್ಶನ್​ ಅವರ ಜಾಮೀನು ಅರ್ಜಿ ವಜಾ ಗೊಂಡಿದೆ.

Advertisement

ದರ್ಶನ್ ವಿಚಾರಣೆ ಬೆಂಗಳೂರಿನ 57ನೇ ಸಿಸಿಎಚ್‌ ಕೋರ್ಟ್​ನಲ್ಲಿ ನಡೆಯಿತು. 120ಕ್ಕೂ ಅಧಿಕ ದಿನಗಳ ಕಾಲ ಜೈಲಿನಲ್ಲಿದ್ದ ದರ್ಶನ್​ ಇಂದು (ಅ.14) ಜಾಮೀನು ಪಡೆಯುವ ನಿರೀಕ್ಷೆಯಲ್ಲಿದ್ದರು. ಆದರೆ ಅವರಿಗೆ ನ್ಯಾಯಾಲಯವು ಬೇಲ್​ ನಿರಾಕರಿಸಿದೆ. ಬಳ್ಳಾರಿ ಜೈಲಿನಲ್ಲಿ ಇರುವ ದರ್ಶನ್​ಗೆ ಜಾಮೀನು ಸಿಗದ ಕಾರಣ ಜೈಲೇ ಗತಿಯಾಗಿದೆ.

ಇದನ್ನೂ ಓದಿ:-Karnataka| ಮೊಬೈಲ್ ನಲ್ಲಿ ಪೊಲೀಸರಿಗೆ ದೂರು ನೀಡುವುದು ಹೇಗೆ? ವಿವರ ಇಲ್ಲಿದೆ.

ಇನ್ನು ಪವಿತ್ರ ಗೌಡ ಅವರ ಜಾಮೀನು ಅರ್ಜಿ ಸಹ ವಜಾ ಆಗಿದೆ. ಇಂದು (ಅ.14) 57ನೇ ಸಿಸಿಹೆಚ್​ ಕೋರ್ಟ್​ ಆದೇಶ ನೀಡಿದೆ. 120ಕ್ಕೂ ಹೆಚ್ಚು ದಿನಗಳ ಕಾಲ ಜೈಲಿನಲ್ಲಿ ಕಾಲ ಕಳೆದಿರುವ ಪವಿತ್ರಾ ಗೌಡ ಅವರ ಜೈಲು ವಾಸ ಮುಂದುವರಿಯಲಿದೆ.

Advertisement

ಕೇಸ್​ನಲ್ಲಿ ಚಾರ್ಜ್​ಶೀಟ್​ ಸಲ್ಲಿಕೆ ಆದ ಬಳಿಕ ಪವಿತ್ರಾ ಗೌಡ ಪರ ವಕೀಲರು ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದರು. ಅವರ ವಿಚಾರಣೆ ನಡೆದಿದ್ದು, ಇಂದು (ಅ.14) ಬೆಂಗಳೂರಿನ 57ನೇ ಸಿಸಿಹೆಚ್​ ಕೋರ್ಟ್​ ಆದೇಶ ನೀಡಿದೆ. ಪವಿತ್ರಾ ಗೌಡ ಅವರಿಗೆ ಜಾಮೀನು ಸಿಕ್ಕಿಲ್ಲ. ಹಾಗಾಗಿ ಅವರು ಪರಪ್ಪನ ಅಗ್ರಹಾರದಲ್ಲಿ ಜೈಲುವಾಸ ಅನುಭವಿಸುವುದು ಅನಿವಾರ್ಯ ಆಗಿದೆ.

ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಅವರು ಬಂಧನಕ್ಕೆ ಒಳಗಾಗಿ ನಾಲ್ಕು ತಿಂಗಳು ಕಳೆದಿವೆ. ಚಾರ್ಜ್​ಶೀಟ್ ಸಲ್ಲಿಕೆ ಬಳಿಕ ಅವರು ಜಾಮೀನು ಅರ್ಜಿ ಸಲ್ಲಿಕೆ ಮಾಡಿದ್ದರು.

ಇದನ್ನೂ ಓದಿ:-Actor Darshan ಗೆ ಐಟಿಸಂಕಷ್ಟ- ಜೈಲಲ್ಲೇ ನಡೆಯಲಿದೆ ವಿಚಾರಣೆ!

ಅವರ ಜಾಮೀನು ಅರ್ಜಿ ವಿಚಾರಣೆ ನಡೆಸಿದ ಬೆಂಗಳೂರಿನ 57ನೇ ಸಿಸಿಎಚ್‌ ಕೋರ್ಟ್​ ಜಾಮೀನು ಕೊಡಲು ನಿರಾಕರಿಸಿದೆ. ಇದರಿಂದ ದರ್ಶನ್ ಬಳ್ಳಾರಿ ಜೈಲಿನಲ್ಲೇ ಮುಂದುವರಿಯುವುದು ಅನಿವಾರ್ಯ ಆಗಿದೆ.

ಇಬ್ಬರೂ ಈ ತೀರ್ಪನ್ನು ಪ್ರಶ್ನಿಸಿ ಹೈಕೋರ್ಟ್​ನಲ್ಲಿ ಅರ್ಜಿ ಸಲ್ಲಿಸಲು ಅವಕಾಶವಿದೆ.

Advertisement
Tags :
Actor DarshanbailEntertainmentgets rejectedKannadapavithra gawdarenukaswamy murder case after 4 months of arrest entertainment newsSandalwood
Advertisement
Next Article
Advertisement