ಪ್ರಮುಖ ಸುದ್ದಿಮುಖಪುಟLocal storyರಾಜ್ಯರಾಷ್ಟ್ರೀಯಅಂತರರಾಷ್ಟ್ರೀಯCrime newsಮನೋರಂಜನೆ
Advertisement

Rain:ಜೂ.19 ಅರಬ್ಬಿ ಸಮುದ್ರದಲ್ಲಿ ಅಲೆಗಳ ಪ್ರಮಾಣ ಹೆಚ್ಚಳ- ಸಾಂಪ್ರದಾಯಿಕ ಮೀನುಗಾರಿಕೆಗೆ ನಿರ್ಬಂಧ

ಕಾರವಾರ :- ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆಯ ಅಬ್ಬರ ಹೆಚ್ಚಾಗಿದ್ದು ,ಗಾಳಿಯ ಪ್ರಮಾಣ ಸಹ ಹೆಚ್ಚಾಗುತಿದ್ದು ,ಅರಬ್ಬಿ ಸಮುದ್ರದಲ್ಲಿ ಜೂ.19 ರಂದು ಅರಬ್ಬಿ ಸಮುದ್ರ ದಲ್ಲಿ ಹೆಚ್ಚಿನ ಗಾಳಿ ಹಾಗೂ ಅಲೆಗಳಿ ಹೆಚ್ಚು ಏಳುವ ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
11:11 PM Jun 18, 2025 IST | ಶುಭಸಾಗರ್
ಕಾರವಾರ :- ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆಯ ಅಬ್ಬರ ಹೆಚ್ಚಾಗಿದ್ದು ,ಗಾಳಿಯ ಪ್ರಮಾಣ ಸಹ ಹೆಚ್ಚಾಗುತಿದ್ದು ,ಅರಬ್ಬಿ ಸಮುದ್ರದಲ್ಲಿ ಜೂ.19 ರಂದು ಅರಬ್ಬಿ ಸಮುದ್ರ ದಲ್ಲಿ ಹೆಚ್ಚಿನ ಗಾಳಿ ಹಾಗೂ ಅಲೆಗಳಿ ಹೆಚ್ಚು ಏಳುವ ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

ಜೂ.19 ಅರಬ್ಬಿ ಸಮುದ್ರದಲ್ಲಿ ಅಲೆಗಳ ಪ್ರಮಾಣ ಹೆಚ್ಚಳ- ಸಾಂಪ್ರದಾಯಿಕ ಮೀನುಗಾರಿಕೆಗೆ ನಿರ್ಬಂಧ.

Advertisement

ಕಾರವಾರ :- ಉತ್ತರ ಕನ್ನಡ (uttara Kannada) ಜಿಲ್ಲೆಯಲ್ಲಿ ಮಳೆಯ ಅಬ್ಬರ ಹೆಚ್ಚಾಗಿದ್ದು ,ಗಾಳಿಯ ಪ್ರಮಾಣ ಸಹ ಹೆಚ್ಚಾಗುತಿದ್ದು ,ಅರಬ್ಬಿ ಸಮುದ್ರದಲ್ಲಿ ಜೂ.19 ರಂದು ಅರಬ್ಬಿ ಸಮುದ್ರ ದಲ್ಲಿ ಹೆಚ್ಚಿನ ಗಾಳಿ ಹಾಗೂ ಅಲೆಗಳಿ ಹೆಚ್ಚು ಏಳುವ ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

ಉತ್ತರ ಕನ್ನಡ ಜಿಲ್ಲಾಡಳಿತ ಭಾರತೀಯ ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಬೆಂಗಳೂರು ರವರ ಮುನ್ಸೂಚನೆಯಂತೆ ಉತ್ತರ ಕನ್ನಡ, ಕರಾವಳಿ ತೀರದ ಮಾಜಾಳಿಯಿಂದ ಭಟ್ಕಳ ವರೆಗೆ ಸಮುದ್ರದಲ್ಲಿ ಎತ್ತರದ ಅಲೆಗಳು ಏಳುವ ಸಾಧ್ಯತೆಗಳ ಬಗ್ಗೆ ಎಚ್ಚರಿಕೆ ನೀಡಲಾಗಿದ್ದು,ಜೂನ್ 19 ರ ಬೆಳಗ್ಗೆ 8:30 ರವರೆಗೆ ಸಮುದ್ರದಲ್ಲಿ 3.7- ರಿಂದ 4.2 ಮೀಟರ್ ವ್ಯಾಪ್ತಿಯ ಎತ್ತರದ ಅಲೆಗಳು ಏಳಬಹುದು ಎಂದು ಜಿಲ್ಲಾಧಿಕಾರಿ ಕೆ. ಲಕ್ಷ್ಮಿ ಪ್ರಿಯ ತಿಳಿಸಿದ್ದಾರೆ.

ಆದ್ದರಿಂದ ಈ ಅವಧಿಯಲ್ಲಿ ಸಣ್ಣ ಹಾಗೂ ಮಧ್ಯಮ ದೋಣಿಗಳು ಮೀನುಗಾರಿಕೆಗೆ ಇಳಿಯದಂತೆ , (ಮುಂಗಾರಿನಲ್ಲಿ ಮೀನುಗಾರಿಕೆಯನ್ನು ನಿರ್ಬಂಧಿಸಲಾಗಿರುತ್ತದೆ.) ಹಾಗೂ
ಸಾರ್ವಜನಿಕರು ಹಾಗೂ ಮೀನುಗಾರರು ಸಮುದ್ರ ಪ್ರದೇಶಗಳಿಗೆ ಹೋಗದಂತೆ ನಿರ್ಬಂಧಿಸಲಾಗಿದೆ.

Advertisement

ಅತ್ಯಂತ ಕಡಿಮೆ ದರದಲ್ಲಿ ಎಲ್ಲಾ ಅಗತ್ಯ ವಸ್ತುಗಳು ಲಭ್ಯ- ಕಾರವಾರ ಬಸ್ ನಿಲ್ದಾಣದ ಹಿಂಭಾಗ ಬ್ರಾಹ್ಮಣ ಗಲ್ಲಿ ,ಕಾರವಾರ.

ಪ್ರವಾಸಿಗರು, ಹಾಗೂ ಸಾರ್ವಜನಿಕರು ನದಿ ,ನೀರಿರುವ ಪ್ರದೇಶ ಮತ್ತು ಸಮುದ್ರಕ್ಕೆ ಇಳಿಯದಂತೆ ಕಟ್ಟೆಚ್ಚರ ವಹಿಸುವಂತೆ ಮತ್ತು ಸಮುದ್ರತೀರಕ್ಕೆ ಮಕ್ಕಳು ಹೋಗದಂತೆ ಪಾಲಕರು ಜಾಗ್ರತೆವಹಿಸಬೇಕು.
ಸಮುದ್ರ ತೀರದಲ್ಲಿ ಯಾವುದೇ ಮನರಂಜನಾ ಚಟುವಟಿಕೆಗಳನ್ನು ಹಮ್ಮಿಕೊಳ್ಳಬಾರದೆಂದು ಜಿಲ್ಲಾಡಳಿತ ಸೂಚಿಸಿದೆ.

ಪ್ರಕೃತಿ ಮೆಡಿಕಲ್ ,ಕಾರವಾರ.
Advertisement
Tags :
Arabian SeaCostal karnatakaKarnatakaRainSeaWeather forecastweves
Advertisement
Next Article
Advertisement