Rain |ರಾಜ್ಯದಲ್ಲಿ ಮಳೆ ಮುಂದುವರಿಕೆ:ಕರಾವಳಿ ಸೇರಿ 23 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
Rain |ರಾಜ್ಯದಲ್ಲಿ ಮಳೆ ಮುಂದುವರಿಕೆ:ಕರಾವಳಿ ಸೇರಿ 23 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್.
Karnataka Rain news (october 19):-ರಾಜ್ಯದಲ್ಲಿ ಮಳೆ (rain)ಮತ್ತಷ್ಟು ದಿನಗಳ ಕಾಲ ಮುಂದುವರಿಯುವ ಸಾಧ್ಯತೆ ಇದ್ದು 23 ಜಿಲ್ಲೆಗಳಲ್ಲಿ ನಾಳೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಕರಾವಳಿ ಭಾಗದಲ್ಲಿ ಗಾಳಿ ಮತ್ತು ಗುಡುಗು ಸಹಿತ ಅಧಿಕ ಮಳೆಯಾಗುವ(rain) ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ(imd) ಎಚ್ಚರಿಸಿದೆ.
Good news |ಸರ್ಕಾರಿ ಅಧಿಕಾರಿಗಳಿಗೆ ಮಿಲಿಟರಿ ಮಾದರಿಯಲ್ಲಿ ಕ್ಯಾಂಟೀನ್ ಸೌಲಭ್ಯ|ವಿಡಿಯೋ ನೋಡಿ
ಉತ್ತರ ಮತ್ತು ಕಲ್ಯಾಣ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಇರಲಿದೆ. ಬೆಂಗಳೂರಿನಲ್ಲಿಯೂ ನಾಳೆ ಗುಡುಗು ಸಹಿತ ಮಳೆ ನಿರೀಕ್ಷಸಲಾಗಿದೆ.
ದಕ್ಷಿಣ ಒಳನಾಡಿನ ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು, ಚಾಮರಾಜನಗರ, ಕೊಡಗು, ತುಮಕೂರು, ಹಾಸನ, ಚಿಕ್ಕಮಗಳೂರು, ಚಿತ್ರದುರ್ಗ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿಯೂ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಇನ್ನು ಉತ್ತರ ಕನ್ನಡ ,ಉಡುಪಿ,ದಕ್ಷಿಣ ಕನ್ನಡ ಸಾಧಾರಣ ಹಾಗೂ ಮಧ್ಯಮ ಗಾತ್ರದ ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
And for orders more than 2499 rs 15% discount ( for Deepavali)We also take birthday parties and family get together etc also