ಪ್ರಮುಖ ಸುದ್ದಿಮುಖಪುಟLocal storyರಾಜ್ಯರಾಷ್ಟ್ರೀಯಅಂತರರಾಷ್ಟ್ರೀಯCrime newsಮನೋರಂಜನೆ
Advertisement

Siddapura 10 ಸಾವಿರ ಪಿಗ್ಮಿ ಹಣಕ್ಕಾಗಿ ವೃದ್ದೆಯನ್ನೇ ಮುಗಿಸಿದ ಹಂತಕರು!

Siddapura news :- ಪಿಗ್ಮಿ ಕಲೆಕ್ಟರ್ ಸಂಗ್ರಹಿಸಿದ್ದ ಹತ್ತು ಸಾವಿರ ರೂಪಾಯಿ ಹಣಕ್ಕಾಗಿ ಮನೆಗೆ ನುಗ್ಗಿ ವೃದ್ದೆಯನ್ನು ಕೊಲೆಮಾಡಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ (siddapura) ನಗರದ ಬಸವನಗಲ್ಲಿಯಲ್ಲಿ ನಡೆದಿದ್ದು ಮೂರು ದಿನದ ನಂತರ ಘಟನೆ ಬೆಳಕಿಗೆ ಬಂದಿದೆ.
10:17 PM Dec 25, 2024 IST | ಶುಭಸಾಗರ್

Siddapura news :- ಪಿಗ್ಮಿ ಕಲೆಕ್ಟರ್ ಸಂಗ್ರಹಿಸಿದ್ದ ಹತ್ತು ಸಾವಿರ ರೂಪಾಯಿ ಹಣಕ್ಕಾಗಿ ಮನೆಗೆ ನುಗ್ಗಿ ವೃದ್ದೆಯನ್ನು ಕೊಲೆಮಾಡಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ (siddapura) ನಗರದ ಬಸವನಗಲ್ಲಿಯಲ್ಲಿ ನಡೆದಿದ್ದು ಮೂರು ದಿನದ ನಂತರ ಘಟನೆ ಬೆಳಕಿಗೆ ಬಂದಿದೆ.

Advertisement

ಸಿದ್ದಾಪುರ ನಗರದ ಬಸವನಗಲ್ಲಿ ನಿವಾಸಿ ಗೀತಾ ಹೂಂಡೆಕರ್(75) ಕೊಲೆಯಾದ ದುರ್ದೈವಿಯಾಗಿದ್ದಾರೆ.

ಸಹಕಾರಿ ಬ್ಯಾಂಕಿನ ಪಿಗ್ಮಿ ಕಲೆಕ್ಟರ್ ಆಗಿ ಕೆಲಸ ಮಾಡುತ್ತಿದ್ದ ಗೀತಾ ಹೂಂಡೆಕರ್ ಪ್ರತಿ ನಿತ್ಯ ಐದರಿಂದ ಹತ್ತು ಸಾವಿರ ರೂಪಾಯಿ ಪಿಗ್ಮಿ ಕಲೆಕ್ಟ್ ಮಾಡುತ್ತಿದ್ದರು.
ಗೀತಾರವರಿಗೆ ಇಬ್ಬರು ಹೆಣ್ಮಕ್ಕಳ ಇದ್ದು, ಇಬ್ಬರ ಮದುವೆ ಮಾಡಿಕೊಟ್ಟಿದ್ದು ಪತಿ ಸಾವನಪ್ಪಿರುವ ಹಿನ್ನೆಲೆ ಕೆಲವು ವರ್ಷಗಳಿಂದ ಮನೆಯಲ್ಲಿ ಒಂಟಿಯಾಗಿ ವಾಸಿಸುತ್ತಿದ್ದರು.

ಸೋಮವಾರ ರಾತ್ರಿ ಪಿಗ್ಮಿ ಸಂಹ್ರಹಿಸಿ ಮನೆಯ ಒಳಗೆ ಹೋದವಳು ಹೊರಗೆ ಬಂದಿರಲಿಲ್ಲ
ಇಂದು ಅಕ್ಕ ಪಕ್ಕದ ಮನೆಯವರಿಗೆ ಅನುಮಾನ ಬಂದು ಅವರ ಮಗಳಿಗೆ ತಿಳಿಸಿದ್ದಾರೆ. ನಂತರ ಮಗಳು ಮತ್ತು ಅಳಿಯ ಮನೆಗೆ ಆಗಮಿಸಿ ಮನೆಬಾಗಿಲು ಒಡೆದು ನೋಡಿದಾಗ ಕೊಲೆಯಾದ ಘಟನೆ ಬೆಳಕಿಗೆ ಬಂದಿದೆ.

Advertisement

ಇದನ್ನೂ ಓದಿ:-Siddapura| ಪಕ್ಕದ ಮನೆಗೇ ಕನ್ನ ಹಾಕಿದ ಬೆಂಗಳೂರು ನೆಂಟ!

ಕಳ್ಳರು ರಾತ್ರಿ ಹೊತ್ತು ಬಾತರೂಂ ಮೆಲ್ಚಾವಣಿಯಿಂದ ಮನೆಗೆ ನುಗ್ಗಿ ಈಕೆಯ ಕತ್ತು ಹಿಸುಕಿ ಕೊಲೆಮಾಡಿ ಮನೆಯಲ್ಲಿದ್ದ ಪಿಗ್ಮಿ ಹಣವನ್ನು ಕದ್ದೊಯ್ದಿದ್ದಾರೆ.
ಘಡನೆ ಸಂಬಂಧ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement
Tags :
financialCrimeJusticeKarnatakaNewsPoliceInvestigationSiddapuraTragicIncidentUttara kannda news
Advertisement
Next Article
Advertisement