ಪ್ರಮುಖ ಸುದ್ದಿಮುಖಪುಟLocal storyರಾಜ್ಯರಾಷ್ಟ್ರೀಯಅಂತರರಾಷ್ಟ್ರೀಯCrime newsಮನೋರಂಜನೆ
Advertisement

Karwar |ಬೇಲಿಕೇರ ಅದಿರು ಪ್ರಕರಣ| ಕಾರವಾರ ಶಾಸಕ ಸೈಲ್ ಗೆ ನ.20 ರ ವರೆಗೆ ಜಾಮೀನು ವಿಸ್ತರಣೆ.

Karnataka High Court extends interim medical bail of Karwar-Ankola MLA Satish Sail till November 20 in the Belekeri iron ore illegal export and money laundering case. Court directs ED to verify medical reports through authorized doctors.
05:13 PM Nov 13, 2025 IST | ಶುಭಸಾಗರ್
Karnataka High Court extends interim medical bail of Karwar-Ankola MLA Satish Sail till November 20 in the Belekeri iron ore illegal export and money laundering case. Court directs ED to verify medical reports through authorized doctors.

Karwar |ಬೇಲಿಕೇರ ಅದಿರು ಪ್ರಕರಣ| ಕಾರವಾರ ಶಾಸಕ ಸೈಲ್ ಗೆ ನ.20 ರ ವರೆಗೆ ಜಾಮೀನು ವಿಸ್ತರಣೆ.

Advertisement

ಕಾರವಾರ: ಬೇಲೆಕೇರಿ ಬಂದರಿನಿಂದ ಅಕ್ರಮವಾಗಿ ಕಬ್ಬಿಣದ ಅದಿರು ಸಾಗಾಟ ಮತ್ತು ಮಾರಾಟಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಆರೋಪಿಯಾಗಿರುವ ಕಾರವಾರ-ಅಂಕೋಲಾ (karwar -ankola) ಶಾಸಕ ಸತೀಶ್ ಸೈಲ್ ಅವರಿಗೆ ಕರ್ನಾಟಕ ಹೈಕೋರ್ಟ್ ತಾತ್ಕಾಲಿಕ ರಿಲೀಫ್ ನೀಡಿದೆ. ಶಾಸಕರಿಗೆ ನೀಡಲಾಗಿದ್ದ ಮಧ್ಯಂತರ ವೈದ್ಯಕೀಯ ಜಾಮೀನು ಅವಧಿಯನ್ನು ನ್ಯಾಯಾಲಯವು ನವೆಂಬರ್ 20ರ ವರೆಗೆ ವಿಸ್ತರಿಸಿ ಆದೇಶ ನೀಡಿದೆ.

Karwar|ವಯಸ್ಸಾದರೂ ವಿವಾಹವಾಗದೇ ಮನನೊಂದ ವ್ಯಕ್ತಿ ಚಾಕು ಇರಿದುಕೊಂಡು ಆತ್ಮಹತ್ಯೆ ಗೆ ಯತ್ನ

 ನ್ಯಾಯಮೂರ್ತಿ ಅವರು ಈ ಕುರಿತು ಆದೇಶ ಹೊರಡಿಸಿದ್ದು, ಶಾಸಕರ ವೈದ್ಯಕೀಯ ದಾಖಲೆಗಳನ್ನು ಪರಿಶೀಲಿಸಲು ಅರ್ಹ ವೈದ್ಯರ ಹೆಸರನ್ನು ಸೂಚಿಸುವಂತೆ ಜಾರಿ ನಿರ್ದೇಶನಾಲಯಕ್ಕೆ (ಇ.ಡಿ.) ನಿರ್ದೇಶನ ನೀಡಿದ್ದಾರೆ. ಶಾಸಕ ಸತೀಶ್ ಸೈಲ್‌ರವರು ವೈದ್ಯಕೀಯ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸುವಂತೆ ಸೂಚಿಸಲಾಗಿದೆ.

Advertisement

Karwar: ಶಾಸಕ ಸೈಲ್ ಮನೆಯಮೇಲೆ ED ರೈಡ್ |ಸಿಕ್ಕಿದ್ದೇನು?

 ವಿಶೇಷ ನ್ಯಾಯಾಲಯವು ಇತ್ತೀಚೆಗೆ ಸತೀಶ್ ಸೈಲ್ ಅವರು ತನಿಖೆಗೆ ಸಹಕರಿಸುತ್ತಿಲ್ಲ ಮತ್ತು ಸೂಚಿಸಲಾದ ವೈದ್ಯಕೀಯ ಚಿಕಿತ್ಸೆಗೆ ಬದ್ಧರಾಗಿಲ್ಲ ಎಂಬ ಕಾರಣ ನೀಡಿ ಅವರ ವೈದ್ಯಕೀಯ ಜಾಮೀನನ್ನು ರದ್ದುಗೊಳಿಸಿ, ಜಾಮೀನು ರಹಿತ ವಾರೆಂಟ್ ಹೊರಡಿಸಿತ್ತು.

Belikeri case| ಅಕ್ರಮ ಅದಿರು ನಾಪತ್ತೆ ಪ್ರಕರಣ ಸತೀಶ್ ಸೈಲ್ ಮಧ್ಯಂತರ  ಜಾಮೀನು ರದ್ದು

ವಿಶೇಷ ನ್ಯಾಯಾಲಯದ ಈ ಆದೇಶವನ್ನು ಪ್ರಶ್ನಿಸಿ ಸೈಲ್ ಅವರು ಹೈಕೋರ್ಟ್‌ಗೆ ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು. ನ್ಯಾಯಾಲಯವು ಅರ್ಜಿಯ ವಿಚಾರಣೆಯನ್ನು ನವೆಂಬರ್ 13ಕ್ಕೆ ಮುಂದೂಡಿದ್ದು, ಅಲ್ಲಿಯವರೆಗೆ ಮಧ್ಯಂತರ ಜಾಮೀನು ಮುಂದುವರೆಸಿತ್ತು. ಇದೀಗ ಮತ್ತೆ ಒಂದು ವಾರಗಳ ಕಾಲ ಜಾಮೀನು ವಿಸ್ತರಣೆ ಮಾಡಿ ಆದೇಶಿಸಿದೆ.

ಕಾರವಾರದ ಸುದ್ದಿ ಓದಲು ಕೆಳಗಿನ ಲಿಂಕ್ ಗೆ ಕ್ಲಿಕ್ ಮಾಡಿ:-

Karwar| ರಾಜ್ಯಕ್ಕಾಗಿ ಎಲ್ಲರೂ ಒಂದಿಲ್ಲ ಒಂದು ತ್ಯಾಗ ಮಾಡಲೇಬೇಕು ನವಂಬರ್ ಕ್ರಾಂತಿ ಬಗ್ಗೆ ಸಚಿವ ಮಂಕಾಳು ವೈದ್ಯ ಹೇಳಿದ್ದು ಹೀಗೆ|ವಿಡಿಯೋ ನೋಡಿ

ಪ್ರಕೃತಿ ಮೆಡಿಕಲ್ ,ಕಾರವಾರ.
Advertisement
Tags :
AnkolaBail Extensionbelekeri portED investigationIllegal MiningIron Ore Scamkarnataka high courtKarwarSatish SailUttara Kannada news
Advertisement
Next Article
Advertisement