Karwar ಇನ್ನುಮುಂದೆ ಗೋ ಹತ್ಯೆ ಏನಾದ್ರೂ ನಡೆದ್ರೆ ಸರ್ಕಲ್ ನಲ್ಲಿ ನಿಲ್ಲಿಸಿ ಗುಂಡ ಹಾಕ್ತೆವಿ-ಸಚಿವ ಮಂಕಾಳು ವೈದ್ಯ
Karwar ಇನ್ನುಮುಂದೆ ಗೋ ಹತ್ಯೆ ಏನಾದ್ರೂ ನಡೆದ್ರೆ ಸರ್ಕಲ್ ನಲ್ಲಿ ನಿಲ್ಲಿಸಿ ಗುಂಡ ಹಾಕ್ತೆವಿ-ಸಚಿವ ಮಂಕಾಳು ವೈದ್ಯ

ಕಾರವಾರ:- ಇನ್ನುಮುಂದೆ ಗೋ ಹತ್ಯೆ ಏನಾದ್ರೂ ನಡೆದ್ರೆ ಸರ್ಕಲ್ ನಲ್ಲಿ ನಿಲ್ಲಿಸಿ ಗುಂಡ ಹಾಕ್ತೆವಿ ಎಂದು ಉತ್ತರ ಕನ್ನಡ ಜಿಲ್ಲೆಯ (uttara kannda)ಜಿಲ್ಲಾ ಉಸ್ತುವಾರಿ ಹಾಗೂ ಮೀನುಗಾರಿಕಾ ಸಚಿವ ಮಂಕಾಳು ವೈದ್ಯ ಗುಡುಗಿದ್ದಾರೆ. ಹೊನ್ನಾವರದ ಸಾಲಕೋಡು ಅರಣ್ಯದಲ್ಲಿ ಗರ್ಭ ಧರಿಸಿದ ಗೋಹತ್ಯೆ ಪ್ರಕರಣ ಕುರಿತು ಮಾಧ್ಯಮಗಳ ಜೊತೆ ಮಾತನಾಡಿದ ಅವರು ಗೋ ಹತ್ಯೆ ಈ ಹಿಂದಿನಿಂದಲೂ ಜಿಲ್ಲೆಯಲ್ಲಿ ನಡೆಯುತ್ತಿದೆ.
ಈ ಹಿಂದೆ ಬಿಜೆಪಿ(Bjp) ಅವಧಿಯಲ್ಲೂ ಜಿಲ್ಲೆಯಲ್ಲಿ ಗೋ ಹತ್ಯೆ ಆಗಿದೆ ಕುಮಟಾ ಶಾಸಕ ದಿನಕರ ಶೆಟ್ಟಿ (MLA Denkae shatty)ಮಾತನಾಡುವಾಗ ನಾಲಿಗೆ ಮೇಲೆ ಹಿಡಿತ ಇರಲಿ,ದಿನಕರ ಶೆಟ್ಟಿ ಈಗ ಏನು ದಿನಕರ ಖಾನ್ ಆಗಿದ್ದಾರಾ..?
ದಿನಕರ ಶೆಟ್ಟಿರವರೇ ನಮ್ಮ ಸಿಎಂ ಬಗ್ಗೆ ,ಸಚಿವರ ಬಗ್ಗೆ ಬಾಯಿಗೆ ಬಂದಂಗೆ ಮಾತನಾಡಬೇಡಿ .ಗೋ ಹಂತಕರನ್ನು ಯಾವುದೇ ಕಾರಣಕ್ಕೂ ರಕ್ಷಿಸುವುದಿಲ್ಲ
ಆರೋಪಿಗಳನ್ನ ಕೂಡಲೆ ಬಂಧಿಸಿ ಶಿಕ್ಷೆ ನೀಡುವಂತೆ ಹೇಳಿದ್ದೇನೆ.ಪೊಲೀಸರು ಆರೋಪಿಗಳನ್ನ ಬಂಧಿಸಿ ಅದರ ಮುಂದೆ ಇನ್ನೊಂದ ಹೆಜ್ಜೆ ಇಟ್ಟಿದ್ದಾರೆ
ಇನ್ನುಮುಂದೆ ಯಾವುದೇ ಕಾರಣಕ್ಕೂ ಗೋ ಕಳ್ಳತನ, ಗೋ ಹತ್ಯೆ ಆಗಬಾರದು ಗೋ ಹತ್ಯೆ ಏನಾದ್ರೂ ನಡೆದ್ರೆ ಸರ್ಕಲ್ ನಲ್ಲಿ ನಿಲ್ಲಿಸಿ ಗುಂಡ ಹಾಕ್ತೆವಿ.
ಇದನ್ನೂ ಓದಿ:-Honnavara ಗರ್ಭಧರಿಸಿದ್ದ ಗೋಹತ್ಯೆ ಮಾಡಿದ್ದ ಓರ್ವ ಆರೋಪಿ ಬಂಧನ ! ಕೆಂಡ ಹಿಡಿದು ನಿಂತವರ ಸುತ್ತಾ ಹಲವು ಪ್ರಶ್ನೆ? ಏನದು
ದುಡಿದುಕೊಂಡು ತಿನ್ನೊಕೆ ಬಹಳಷ್ಟು ದಾರಿ ಇದೆ ಬದುಕಿ ಜೀವನ ಮಾಡಿ,ಗೋ ಹತ್ಯೆ ಮಾಡಿ ಜೀವನ ಮಾಡುವುದನ್ನ ನಿಲ್ಲಿಸಿ,ಗೋ ಹತ್ಯೆ ಹಿಂದೆ ಯಾವುದೇ ಧರ್ಮದವರಿದ್ರು ರಕ್ಷಣೆ ಮಾಡುವ ಪ್ರಶ್ನೆಯೆ ಇಲ್ಲ ಎಂದರು.