ಪ್ರಮುಖ ಸುದ್ದಿಮುಖಪುಟLocal storyರಾಜ್ಯರಾಷ್ಟ್ರೀಯಅಂತರರಾಷ್ಟ್ರೀಯCrime newsಮನೋರಂಜನೆ
Advertisement

Kundapur: ಕೊಲ್ಲೂರು ಮೂಕಾಂಬಿಕೆಗೆ 4 ಕೋಟಿ ಮೌಲ್ಯದ ವಜ್ರದ ಕಿರೀಟ ಅರ್ಪಿಸಿದ ಸಂಗೀತ ಮಾಂತ್ರಿಕ ಇಳಯರಾಜ

ಕೊಲ್ಲೂರು: ದೇಶದ ಪ್ರಸಿದ್ಧ ಸಂಗೀತ ನಿರ್ದೇಶಕ,  ಸ್ವರ ಮಾಂತ್ರಿಕ ಇಳಯರಾಜ ,ಇಂದು ಹರಕೆ ರೂಪದಲ್ಲಿ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಗೆ ಸುಮಾರು 4 ಕೋಟಿ ರೂ. ಮೌಲ್ಯದ ವಜ್ರ ಖಚಿತ ಕಿರೀಟವನ್ನು ಸಮರ್ಪಿಸಿದರು.
11:10 AM Sep 11, 2025 IST | ಶುಭಸಾಗರ್
ಕೊಲ್ಲೂರು: ದೇಶದ ಪ್ರಸಿದ್ಧ ಸಂಗೀತ ನಿರ್ದೇಶಕ,  ಸ್ವರ ಮಾಂತ್ರಿಕ ಇಳಯರಾಜ ,ಇಂದು ಹರಕೆ ರೂಪದಲ್ಲಿ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಗೆ ಸುಮಾರು 4 ಕೋಟಿ ರೂ. ಮೌಲ್ಯದ ವಜ್ರ ಖಚಿತ ಕಿರೀಟವನ್ನು ಸಮರ್ಪಿಸಿದರು.

Kundapur: ಕೊಲ್ಲೂರು ಮೂಕಾಂಬಿಕೆಗೆ 4 ಕೋಟಿ ಮೌಲ್ಯದ ವಜ್ರದ ಕಿರೀಟ ಅರ್ಪಿಸಿದ ಸಂಗೀತ ಮಾಂತ್ರಿಕ ಇಳಯರಾಜ

Advertisement

ವರದಿ -ಮಂಜು ಕುಂದಾಪುರ

ಕೊಲ್ಲೂರು: ದೇಶದ ಪ್ರಸಿದ್ಧ ಸಂಗೀತ ನಿರ್ದೇಶಕ,  ಸ್ವರ ಮಾಂತ್ರಿಕ ಇಳಯರಾಜ ,ಇಂದು ಹರಕೆ ರೂಪದಲ್ಲಿ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಗೆ ಸುಮಾರು 4 ಕೋಟಿ ರೂ. ಮೌಲ್ಯದ ವಜ್ರ ಖಚಿತ ಕಿರೀಟವನ್ನು ಸಮರ್ಪಿಸಿದರು.

ಶ್ರೀದೇವಿ ಸನ್ನಿಧಿಗೆ ವಜ್ರ ಖಚಿತ ಕಿರೀಟವನ್ನು ಓಲಗ ಮಂಟಪದಿಂದಪುರಮೆರವಣಿಗೆಯಲ್ಲಿ ಬರಮಾಡಿಕೊಳ್ಳಲಾಯಿತು.

Advertisement

ಕೊಲ್ಲೂರು ಮೂಕಾಂಬಿಕೆಯ ಪರಮ ಭಕ್ತನಾಗಿರುವ ಇಳೆಯರಾಜ,ಈ ಹಿಂದೆಯೂ ಮೂಕಾಂಬಿಕೆಗೆ ಬಗೆ ಬಗೆಯ ಆಭರಣ ತೊಡಿಸಿ ಖುಷಿಪಟ್ಟಿದ್ದರು.

ಈ ಬಾರಿ ವಜ್ರದ ಕಿರೀಟ ಸಹಿತ ಆಭರಣಗಳ ಜೊತೆಗೆ ,ವೀರಭದ್ರ ದೇವರಿಗೆ ರಜತ ಕಿರೀಟ ಮತ್ತು ಖಡ್ಗ ಸಮರ್ಪಣೆ ಮಾಡಿದರು.ಆಭರಣ ಅರ್ಪಿಸುವ ಮುನ್ನ ಆಕರ್ಷಕ ಮೆರವಣಿಗೆ ನಡೆಯಿತು.ದೇಗುಲದ ಆಡಳಿತ ಮಂಡಳಿ ಹಾಗೂ ಅರ್ಚಕರು ಮೆರವಣಿಗೆಯಲ್ಲಿ ಭಾಗಿಯಾದರು.ಕೋಟ್ಯಂತರ ಮೌಲ್ಯದ ಆಭರಣ ಅರ್ಪಿಸಿ  ಇಳೆಯರಾಜ ಭಾವುಕರಾದರು.

ಕೊಲ್ಲೂರು ಮೂಕಾಂಬಿಕೆಗೆ ನೀಡಿದ ವಜ್ರ ಕಚಿತ ಖಡ್ಗ
ಕೊಲ್ಲೂರು ಮೂಕಾಂಬಿಕೆಗೆ ವಜ್ರ ಕಚಿತ ಕಿರೀಟ ಸಮರ್ಪಣೆ

ಮೂಕಾಂಬಿಕೆಯಿಂದಾಗಿ ತನ್ನ ಜೀವನದಲ್ಲಿ ಪವಾಡ ನಡೆದಿದೆ ಎಂದು ಇಳಯರಾಜ ನಂಬುತ್ತಾರೆ. ಈ ಹಿನ್ನೆಲೆಯಲ್ಲಿ ಪ್ರತೀ ವರ್ಷ ತಮ್ಮ ಹುಟ್ಟುಹಬ್ಬವನ್ನು ಇಲ್ಲೇ ಆಚರಣೆ ಮಾಡುತ್ತಾರೆ.ಮಾತ್ರವಲ್ಲ ,ಸಂಗೀತ ಸೇವೆಯನ್ನೂ ನೀಡುತ್ತಾ ಬಂದಿದ್ದಾರೆ.ಇಂದಿನ ಕಾರ್ಯಕ್ರಮದಲ್ಲಿ ಭಕ್ತರು, ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.ದೇಗುಲದ ವ್ಯವಸ್ಥಾಪನಾ ಸಮಿತಿ ವತಿಯಿಂದ ಮಹಾದಾನಿಗೆ ಗೌರವಾರ್ಪಣೆ ಮಾಡಲಾಯಿತು.

Advertisement
Tags :
devotional newsdiamond crown donationIlaiyaraajaKarnataka templesKollur Mookambika TempleKundapur newsSouth Indian music composertemple offerings
Advertisement
Next Article
Advertisement