Landslide: ಬಾಳೆಬರೆ ಘಾಟಿಯಲ್ಲಿ ಭಾರಿ ವಾಹನಕ್ಕೆ ನಿಷೇಧ - ಚಾರಕ್ಕೆ ಪರ್ಯಾಯ ವ್ಯವಸ್ಥೆ
Landslide: ಬಾಳೆಬರೆ ಘಾಟಿಯಲ್ಲಿ ಭಾರಿ ವಾಹನಕ್ಕೆ ನಿಷೇಧ - ಚಾರಕ್ಕೆ ಪರ್ಯಾಯ ವ್ಯವಸ್ಥೆ
ಶಿವಮೊಗ್ಗ: ಅಬ್ವರದ ಮಳೆಗೆ (rain) ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ (Thirthahalli) – ಕುಂದಾಪುರ ರಾಜ್ಯ ಹೆದ್ದಾರಿ 52ರ ಬಾಳೆಬರೆ ಘಾಟ್ ಸರಪಳಿ ಹೆರ್ಪಿನ್ ತಿರುವಿನಲ್ಲಿ ಭೂಕುಸಿತ (Landslide) ಉಂಟಾಗಿದೆ.
ಮಳೆ (Rain) ಚುರುಕುಗೊಂಡಿದ್ದು ಮತ್ತೆ ಮಣ್ಣು ಕುಸಿಯುವ ಆತಂಕವಿದೆ. ಇದಲ್ಲದೇ ರಸ್ತೆ ಅಂಚಿನಲ್ಲೇ ಭೂ ಕುಸಿತವಾಗಿದ್ದು ,ಯಾವ ಸಂದರ್ಭದಲ್ಲಿಯಾದರೂ ಭೂ ಕುಸಿಯುವ ಆತಂಕವಿದೆ.
ಈ ಹಿನ್ನಲೆಯಲ್ಲಿ ಸುರಕ್ಷತಾ ದೃಷ್ಠಿಯಿಂದ (ಮಾಸ್ತಿಕಟ್ಟೆಯಿಂದ ಹೊಸಂಗಡಿಯವರೆಗೆ) ತಾತ್ಕಾಲಿಕವಾಗಿ ಮಳೆಗಾಲ ಮುಗಿಯುವವರೆಗೆ ಭಾರಿ ವಾಹನಗಳ ಸಂಚಾರವನ್ನು ನಿಷೇಧಿಸಿ ಶಿವಮೊಗ್ಗ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಆದೇಶಿಸಿದ್ದಾರೆ.

ಬದಲಿ ಮಾರ್ಗ ಏನು?
ತೀರ್ಥಹಳ್ಳಿಯಿಂದ ರಾವೆ – ಕಾನಗೋಡು – ಮಾಸ್ತಿಕಟ್ಟೆ- ಹುಲಿಕಲ್ ಘಾಟ್ – ಹೊಸಂಗಡಿ – ಸಿದ್ದಾಪುರ ಮೂಲಕ ಕುಂದಾಪುರದ ಕಡೆಗೆ ಹೋಗುವ ಭಾರಿ ವಾಹನಗಳು ಪರ್ಯಾಯ ಮಾರ್ಗವಾಗಿ ತೀರ್ಥಹಳ್ಳಿ – ರಾವೆ- ಕಾನುಗೋಡು – ನಗರ – ಕೊಲ್ಲೂರು – ಕುಂದಾಪುರ ರಸ್ತೆ ಮೂಲಕ ಸಂಚರಿಸಲು ಬದಲಿ ಮಾರ್ಗ ಸೂಚಿಸಲಾಗಿದೆ.