Uttara kannda ಕ್ಕಾಗಿ ಕೇಂದ್ರ ಮಂತ್ರಿ ಭೇಟಿ- ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಇಟ್ಟ ಮೂರು ಬೇಡಿಕೆ ಏನು?
Uttara kannda news 26 November 2024:-ಇಂದು ಉತ್ತರ ಕನ್ನಡ ಜಿಲ್ಲೆಯ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿಯವರು (vishweshvar hegde kageri) ನವದೆಹಲಿಯಲ್ಲಿ ರಕ್ಷಣಾ ಮಂತ್ರಿ ರಾಜನಾಥ್ ಸಿಂಗ್ (Rajnath singh) ಅವರನ್ನು ಅವರ ಕಚೇರಿಯಲ್ಲಿ ಭೇಟಿ ಮಾಡಿ ಜಿಲ್ಲೆಯ ಸೀಬರ್ಡ (seabird) ಯೋಜನೆಯಿಂದ ಆದ ಸಮಸ್ಯೆ ಬಗ್ಗೆ ಮನವಿ ನೀಡಿ ಚರ್ಚಿಸಿದರು.
ರಕ್ಷಣಾ ಮಂತ್ರಿ ಮುಂದೆ ಇಟ್ಟ ಬೇಡಿಕೆ ಇದು!
1) ಕಾರವಾರದ ಸೀಬರ್ಡ್ ನೌಕಾನೆಲೆಯಿಂದ ಉಂಟಾಗಿರುವ ಸಮಸ್ಯೆ ಇತ್ಯರ್ಥವಾಗಬೇಕು.
ಬಾಕಿ ಇರುವ ಭೂ ಪರಿಹಾರವನ್ನು ತಕ್ಷಣವೇ ನೀಡಬೇಕು ಹಾಗೂ ಬಾಕಿ ಇರುವ ನಾನಾ ಸಮಸ್ಯೆಗಳ ಕಡತಗಳನ್ನು ಅತಿ ಶೀಘ್ರದಲ್ಲಿ ವಿಲೇವಾರಿ ಮಾಡಬೇಕು.
2) ನೌಕಾ ನೆಲೆಗಾಗಿ ಭೂಮಿ ಕಳೆದುಕೊಂಡವರಿಗೆ ಹಾಗೂ ಸ್ಥಳೀಯರಿಗೆ ಉದ್ಯೋಗದಲ್ಲಿ ಹೆಚ್ಚಿನ ಆದ್ಯತೆ ನೀಡಬೇಕು.
3) ಸಿ ಬರ್ಡ್ ನೌಕನೆಲೆಯಲ್ಲಿ ನಡೆಯುವ ಉದ್ಯೋಗ ಪರೀಕ್ಷಾ ಕೇಂದ್ರವನ್ನು ಕಾರವಾರದಲ್ಲಿಯೇ ಸ್ಥಾಪಿಸಬೇಕು
ಈ ಮೂರು ಬೇಡಿಕೆ ಯನ್ನು ಮನವಿರೂಪದಲ್ಲಿ ರಕ್ಷಣಾ ಸಚಿವರಿಗೆ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ನೀಡಿದರು.
ಇದನ್ನೂ ಓದಿ:-Gokarna ಆರೋಗ್ಯ ಕೇಂದ್ರದಲ್ಲಿದ್ದ ಕೋಟಿ ಮೌಲ್ಯದ ಪುರಾತನ ಬುದ್ದನ ಲೋಹ ಶಿಲ್ಪ ಕಾಣೆ!