For the best experience, open
https://m.kannadavani.news
on your mobile browser.
Advertisement

Bhatkal :ಪುರಾಣ ಪ್ರಸಿದ್ಧ ಮುರುಡೇಶ್ವರ ದೇವಾಲಯದಲ್ಲಿ ವಸ್ತ್ರ ಸಂಹಿತೆ ಜಾರಿ

ಕಾರವಾರ :- ಉತ್ತರ ಕನ್ನಡ (uttara kannada) ಜಿಲ್ಲೆಯ ಧಾರ್ಮಿಕ ಕ್ಷೇತ್ರಗಳಲ್ಲಿ ವಸ್ತ್ರ ಸಂಹಿತೆಯನ್ನು ಕಡ್ಡಾಯ ಗೊಳಿಸಲಾಗುತ್ತಿದೆ. ಜಿಲ್ಲೆಯ ಪುರಾಣ ಪ್ರಸಿದ್ಧ ಸ್ಥಳವಾದ ಗೋಕರ್ಣದ (Gokarna)ಮಹಾಬಲೇಶ್ವರ ದೇವಸ್ಥಾನದಲ್ಲಿ ಈಗಾಗಲೇ ವಸ್ತ್ರ ಸಂಹಿತೆ ಜಾರಿ ಮಾಡಲಾಗಿದೆ.
11:00 PM Jun 22, 2025 IST | ಶುಭಸಾಗರ್
ಕಾರವಾರ :- ಉತ್ತರ ಕನ್ನಡ (uttara kannada) ಜಿಲ್ಲೆಯ ಧಾರ್ಮಿಕ ಕ್ಷೇತ್ರಗಳಲ್ಲಿ ವಸ್ತ್ರ ಸಂಹಿತೆಯನ್ನು ಕಡ್ಡಾಯ ಗೊಳಿಸಲಾಗುತ್ತಿದೆ. ಜಿಲ್ಲೆಯ ಪುರಾಣ ಪ್ರಸಿದ್ಧ ಸ್ಥಳವಾದ ಗೋಕರ್ಣದ (Gokarna)ಮಹಾಬಲೇಶ್ವರ ದೇವಸ್ಥಾನದಲ್ಲಿ ಈಗಾಗಲೇ ವಸ್ತ್ರ ಸಂಹಿತೆ ಜಾರಿ ಮಾಡಲಾಗಿದೆ.
bhatkal  ಪುರಾಣ ಪ್ರಸಿದ್ಧ ಮುರುಡೇಶ್ವರ ದೇವಾಲಯದಲ್ಲಿ ವಸ್ತ್ರ ಸಂಹಿತೆ ಜಾರಿ

Bhatkal :ಪುರಾಣ ಪ್ರಸಿದ್ಧ ಮುರುಡೇಶ್ವರ ದೇವಾಲಯದಲ್ಲಿ ವಸ್ತ್ರ ಸಂಹಿತೆ ಜಾರಿ

Advertisement

ಕಾರವಾರ :- ಉತ್ತರ ಕನ್ನಡ (uttara kannada) ಜಿಲ್ಲೆಯ ಧಾರ್ಮಿಕ ಕ್ಷೇತ್ರಗಳಲ್ಲಿ ವಸ್ತ್ರ ಸಂಹಿತೆಯನ್ನು ಕಡ್ಡಾಯ ಗೊಳಿಸಲಾಗುತ್ತಿದೆ. ಜಿಲ್ಲೆಯ ಪುರಾಣ ಪ್ರಸಿದ್ಧ ಸ್ಥಳವಾದ ಗೋಕರ್ಣದ (Gokarna)ಮಹಾಬಲೇಶ್ವರ ದೇವಸ್ಥಾನದಲ್ಲಿ ಈಗಾಗಲೇ ವಸ್ತ್ರ ಸಂಹಿತೆ ಜಾರಿ ಮಾಡಲಾಗಿದೆ.

ಇದನ್ನೂ ಓದಿ:-Murdeshwara ಅದ್ದೂರಿಯಾಗಿ ನಡೆಯಿತು ಮಹಾರಥೋತ್ಸವ ಹೇಗುತ್ತು ವಿಡಿಯೋ ನೋಡಿ.

ಇದರ ಬೆನ್ನಲ್ಲೇ ಇದೀಗ ಭಟ್ಕಳ ತಾಲೂಕಿನ ಪ್ರಸಿದ್ಧ ಶಿವ ಕ್ಷೇತ್ರವಾದ ಮುರುಡೇಶ್ವರ (Murdeshwar) ಶಿವಾಲಯದಲ್ಲೂ ವಸ್ತ್ರ ಸಂಹಿತೆ ಜಾರಿಗೆ ತಂದಿದೆ ಇಲ್ಲಿನ ಆಡಳಿತಮಂಡಳಿ.

ಮುರುಡೇಶ್ವರ ಪ್ರಸಿದ್ಧ ಪ್ರವಾಸಿ ಸ್ಥಳವಾಗಿದ್ದು ಲಕ್ಷಾಂತರ ಜನ ಪ್ರವಾಸಿಗರು ಮುರುಡೇಶ್ವರಕ್ಕೆ ಭೇಟಿ ನೀಡುತ್ತಾರೆ.

ಇಲ್ಲಿನ ಜಲಸಾಹಸ ಕ್ರೀಡೆ, ಸ್ಕೂಬಾ ಡೈವ್ ಗಳು ಪ್ರಸಿದ್ಧವಾಗಿದ್ದು ,ಬೃಹತ್ ಶಿವನ ಮೂರ್ತಿ ವಿಶ್ವ ಪ್ರಸಿದ್ಧಿ ಪಡೆದಿದೆ.

ಇನ್ನು ಇಲ್ಲಿಗೆ ಬರುವ ಪ್ರವಾಸಿಗರು ಕಡಲ ತೀರಕ್ಕೆ ಭೇಟಿ ನೀಡಿದ ನಂತರ ಶಿವನ ದೇವಾಲಯಕ್ಕೂ ಭೇಟಿ ನೀಡುತ್ತಾರೆ‌ .ಈ ವೇಳೆ ಪುರುಷರು ಚಡ್ಡಿ,ಬನಿಯನ್ ನಲ್ಲಿ ಬಂದರೇ ಮಹಿಳೆಯರು ಸಹ ಧಾರ್ಮಿಕ ಸ್ಥಳದಲ್ಲಿ ಧರಿಸಬೇಕಾದ ವಸ್ತ್ರ ಧರಿಸದೇ ಅಸಭ್ಯ ರೀತಿಯಲ್ಲಿ ದೇವರ ದರ್ಶನಕ್ಕೆ ಬರುತಿದ್ದು ,ಆಸ್ತಿಕ ಭಕ್ತರು ಈ ಬಗ್ಗೆ ಆಡಳಿತ ಮಂಡಳಿಗೆ ವಸ್ತ್ರ ಸಂಹಿತೆ ಜಾರಿ ತರುವಂತೆ ಮನವಿ ಮಾಡಿದ್ದರು.

ಇದನ್ನೂ ಓದಿ:-Bhatkal :ನೀರು ಹೋಗಲು ಹೆದ್ದಾರಿಯಲ್ಲಿ ತೆಗೆದ ಗುಂಡಿಯಲ್ಲಿ ಬಿದ್ದ ವಾಹನ ಸವಾರರು! 

ಹೀಗಾಗಿ ಈಗ ಆಡಳಿತ ಮಂಡಳಿ ಈ ಬಗ್ಗೆ ನಿರ್ಧಾರ ಕೈಗೊಂಡಿದ್ದು ,ಪುರುಷರಿಗೆ ಪಂಚೆ ಮತ್ತು ಮಹಿಳೆಯರಿಗೆ ಸೀರೆ, ಚೂಡಿದಾರ ಧರಿಸಿದರೆ ಮಾತ್ರ  ಬಳಕೆಗೆ ಅವಕಾಶ ನೀಡಲು ತೀರ್ಮಾನಿಸಿದ್ದು ದೇವಾಲಯದ ಎದುರುಭಾಗ ಸೂಚನ ಫಲಕ ಹಾಕಲಾಗಿದ್ದು ,ಯಾವ ವಸ್ತ್ರ ಧರಿದಬೇಕು ಎಂದು ಫಲಕದಲ್ಲಿ ನಮೋಧಿಸಲಾಗಿದೆ.

ಈ ದೇವಸ್ಥಾನ ಖಾಸಗಿ ಆಡಳಿತ ಮಂಡಳಿ ಹೊಂದಿದ್ದು ಉದ್ಯಮಿ ಆರ್.ಎನ್ .ಶಟ್ಟಿ ರವರ ಕುಟುಂಬ ಈ ದೇವಸ್ಥಾನದ ನಿರ್ವಹಣೆ ಮಾಡುತ್ತಿದೆ.

Advertisement
Tags :
Advertisement
Advertisement

.

tlbr_img1 ಹೋಮ್ tlbr_img2 ಟ್ರೆಂಡಿಂಗ್ tlbr_img3 ವಿಡಿಯೋ