Bhatkal:ಭಟ್ಕಳ ನಗರವನ್ನು 24 ಗಂಟೆಯಲ್ಲಿ ಸ್ಪೋಟಿಸುವುದಾಗಿ ಪೊಲೀಸ್ ಠಾಣೆಗೆ ಇಮೇಲ್ ಬೆದರಿಕೆ ಹಾಕಿದ ಇಬ್ಬರು ವಶಕ್ಕೆ
Bhatkal:ಭಟ್ಕಳ ನಗರವನ್ನು 24 ಗಂಟೆಯಲ್ಲಿ ಸ್ಪೋಟಿಸುವುದಾಗಿ ಪೊಲೀಸ್ ಠಾಣೆಗೆ ಇಮೇಲ್ ಬೆದರಿಕೆ ಹಾಕಿದ ಇಬ್ಬರು ವಶಕ್ಕೆ
ಕಾರವಾರ :- ಉತ್ತರ ಕನ್ನಡ(uttara kannada) ಜಿಲ್ಲೆಯ ಭಟ್ಕಳ(bhatkal) ನಗರವನ್ನು 24 ಗಂಟೆಯೊಳಗೆ ಸ್ಫೋಟಿಸುವುದಾಗಿ ಭಟ್ಕಳ ಶಹರ ಠಾಣೆಗೆ ಇಮೇಲ್ (Email) ಮಾಡಿರುವ ಪ್ರಕರಣ ಸಂಬಂಧ ತಮಿಳುನಾಡು ಮೂಲದ ಕಣ್ಣನ್ ಎಂಬಾತನನ್ನು ಭಟ್ಕಳ ಶಹರ ಠಾಣೆ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಇದನ್ನೂ ಓದಿ:-Bhatkal: ಅಣ್ಣನ ಹೆಸರಿನಲ್ಲಿ ಮೂರು ವರ್ಷ ಪದವಿ ಓದಿದ ತಮ್ಮ
ಪ್ರಕರಣ ಬೆನ್ನುಹತ್ತಿದ ಭಟ್ಕಳ ಪೊಲೀಸರಿಗೆ ಆಗಾತಕಾರಿ ವಿಷಯ ಹೊರಬಂದಿದ್ದು ,ಕಣ್ಣನ್ ಎಂಬ ತಮಿಳುನಾಡು ಮೂಲದ ವ್ಯಕ್ತಿಯ ಮೊಬೈಲ್ ನಿಂದ ಮತ್ತೊಬ್ಬ ವ್ಯಕ್ತಿ ಈ ಕೃತ್ಯ ಮಾಡಿರುವುದು ಬಯಲಿಗೆ ಬಂದಿದೆ.
ಕಣ್ಣನ್ ಎಂಬ ವ್ಯಕ್ತಿಯಿಂದ ಮೋಬೈಲ್ ನನ್ನು ಹೇಗೆ ತೆಗೆದುಕೊಂಡ ಎಂಬುವುದರ ಬಗ್ಗ ಮಾಹಿತಿ ಕಲೆ ಹಾಕಿರುವ ಪೊಲೀಸರು, ಕಣ್ಣನ್ ಮತ್ತು ಮೋಸ್ಟ್ ವಾಂಟೇಡ್ ವ್ಯಕ್ತಿಯ ನಡುವಿನ ಭೇಟಿಯ ಕುರಿತು ಕಾರ್ಯಾಚರಣೆ ಪೂರ್ತಿ ಬಳಿಕೆ ಮಾಹಿತಿ ನೀಡುವುದಾಗಿ ಉತ್ತರ ಕನ್ನಡ ಜಿಲ್ಲೆಯ ಎಸ್.ಪಿ ಎಂ .ನಾರಾಯಣ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.
ಇದನ್ನೂ ಓದಿ:-Karnataka: ಗೋಕರ್ಣದ ಗುಹೆಯಲ್ಲಿ ಏಕಾಂಗಿಯಾಗಿ ಮಕ್ಕಳೊಂದಿಗೆ ವಾಸ ಮಾಡುತಿದ್ದ ವಿದೇಶಿ ಮಹಿಳೆ ರಕ್ಷಣೆ
ಕಣ್ಣನ್ ಮೊಬೈಲ್ ಮೂಲಕ ಪೋಸ್ಟ್ ಮಾಡಿದ ಮೋಸ್ಟ್ ವಾಂಟೆಡ್ ವ್ಯಕ್ತಿ ಮೈಸೂರಿನಲ್ಲಿರುವುದು ಪೊಲೀಸರಿಗೆ ಖಚಿತವಾಗಿದೆ.
ಈ ಹಿಂದೆ ಮೈಸೂರು, ಬಳ್ಳಾರಿ, ಕೇರಳ ಸೇರಿದಂತೆ ಬೇರೆ ಕಡೆಗೂ ಬಾಂಬ್ ಸ್ಫೋಟಿಸುವ ಬೇದರಿಕೆ ಹಾಕಿದ್ದ ಈ ಮೋಸ್ಟ್ ವಾಂಟೆಡ್ ವ್ಯಕ್ತಿ ಯನ್ನು ಕರ್ನಾಟಕ ಮತ್ತು ಕೇರಳ ಪೊಲೀಸರ ಕಾರ್ಯಾಚರಣೆಯಿಂದ ಇದೀಗ ಪತ್ತೆ ಮಾಡಿದ್ದಾರೆ.
ಮೈಸೂರಿನಿಂದ ನಾಳೆ ಕಾರವಾರಕ್ಕೆ ಕರೆ ತಂದು ವಿಚಾರಣೆ ನಡೆಸಲಿದ್ದಾರೆ.ಸದ್ಯ ಭಟ್ಕಳಕ್ಕೆ ಬಾಂಬ್ ಇಟ್ಟು ಸ್ಪೋಟಿಸುವ ಸಂದೇಶ ಕಳುಹಿಸಿದವರನ್ನು 24 ಗಂಟೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಪೊಲೀಸರು ಪತ್ತೆ ಹಚ್ಚುವಲ್ಲಿ ಯಶಸ್ಸು ಕಂಡಿದ್ದಾರೆ.