Uttara kannada : ಅಂಗನವಾಡಿಗಳಿಗೆ ನಾಳೆ ರಜೆ ಘೋಷಣೆ-ಜಿಲ್ಲಾಧಿಕಾರಿ
Uttara kannada : ಅಂಗನವಾಡಿಗಳಿಗೆ ನಾಳೆ ರಜೆ ಘೋಷಣೆ-ಜಿಲ್ಲಾಧಿಕಾರಿ

ಉತ್ತರ ಕನ್ನಡ ಜಿಲ್ಲೆಯಲ್ಲಿ ಹೆಚ್ವಿನ ಮಳೆಯಾಗುತ್ತಿರು ಹಿನ್ನೆಲೆಯಲ್ಲಿ ನಾಳೆ ಅಂಗನವಾಡಿಗೆ ರಜೆ ನೀಡಲಾಗಿದೆ
ಜಿಲ್ಲಾಧಿಕಾರಿ ಆದೇಶ ಪ್ರತಿ:-
ಮಳೆ ಯಲ್ಲಿ ದಾಖಲೆ ಬರೆದ ಉತ್ತರ ಕನ್ನಡ ಜಿಲ್ಲೆ-150 ಮಿ.ಮೀ ಗೂ ಹೆಚ್ಚು ಮಳೆ
ಕಾರವಾರ :- ಬೆಸಿಗೆ ತಾಪಮಾನ ಬಳಿಕ ಮಳೆಯಲ್ಲೂ ಉತ್ತರ ಕನ್ನಡ ಜಿಲ್ಲೆ ದಾಖಲೆ ಸೃಷ್ಟಿಸಿದೆ.ಕಳೆದ 24 ಗಂಟೆಯಲ್ಲಿ ಉತ್ತರ ಕನ್ನಡ ಜಿಲ್ಲೆಯಲ್ಲಿ ಅತಿ ಹೆಚ್ಚು ಮಳೆ ದಾಖಲಾಗಿದೆ.
ಭಟ್ಕಳದ ಮಾರುಕೇರಿ ಗ್ರಾಮದಲ್ಲಿ 150mm ಮಳೆ ದಾಖಲಾಗಿದೆ.ಈ ವರ್ಷದ ಬೇಸಿಗೆ ಆರಂಭದಲ್ಲಿ ಕಾರವಾರದ ಸಾವಂತವಾಡ ದಲ್ಲಿ ಸುಮಾರು 42ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿತ್ತು.
ರಾಜ್ಯದಲ್ಲಿ ಸುಮಾರು 25 ಕಡೆ 100 mm ಹೆಚ್ಚು ಮಳೆ ಸುರಿದಿದೆ 25 ಕಡೆಗಳ ಪೈಕಿ ಉತ್ತರ ಕನ್ನಡ ಜಿಲ್ಲೆಯ 11 ಕಡೆ 100mm ಕ್ಕೂ ಅಧಿಕ ಮಳೆಯಾಗಿದೆ.
ಮುಂದಿನ ಮೂರು ದಿನಗಳ ಕಾಲ ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಮುನ್ಸೂಚನೆ ನೀಡಲಾಗಿದೆ.
ಉತ್ತರ ಕನ್ನಡ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಅನ್ನು ಹವಾಮಾನ ಇಲಾಖೆ ಘೋಷಿಸಿದೆ. ಜಿಲ್ಲೆಯಲ್ಲಿ ಮಳೆಯ ಅಬ್ಬರ ಇನ್ನಷ್ಟು ಜಾಸ್ತಿ ಆಗುವ ಸಾಧ್ಯತೆ ಹಿನ್ನಲೆಯಲ್ಲಿ
ಜಿಲ್ಲಾಡಳಿತದ ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದ್ದು ಯಾವುದೇ ದೊಡ್ಡ ಮಟ್ಟದ ಹಾನಿ ಸಂಭವಿಸಿಲ್ಲ.
ಕಳೆದ ಮೂರು ತಿಂಗಳಿಂದ ಮಳೆಯ ಕುರಿತು ಮುನ್ನೆಚ್ಚರಿಕೆ ಕೈಗೊಳ್ಳುತ್ತಿರುವ ಜಿಲ್ಲಾಡಳಿತ
ಸದ್ಯ ಗುಡ್ಡ ಕುಸಿಯುವ ಭೀತಿ ಹೆಚ್ಚಿದ್ದು ಭಾರಿ ಮುನ್ನೆಚ್ಚರಿಕೆ ಕೈಗೊಳ್ಳುತ್ತಿದೆ . ಇದಲ್ಲದೇ ಹೆದ್ದಾರಿಯ 19 ಪ್ರದೇಶಗಳಲ್ಲಿ ವಾಹನ ನಿಲ್ಲಿಸದಂತೆ ನಿರ್ಬಂಧ ವಿಧಿಸಲಾಗಿದೆ.