Karwar: ಪ್ರೇಮ ವೈಫಲ್ಯ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಕಾಲೇಜು ವಿದ್ಯಾರ್ಥಿ
Karwar: ಪ್ರೇಮ ವೈಫಲ್ಯ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಕಾಲೇಜು ವಿದ್ಯಾರ್ಥಿ
ಕಾರವಾರ:- ಪ್ರೇಮ ವೈಫಲ್ಯದಿಂದ ಮನನೊಂದ ಯುವಕ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಉತ್ತರಕನ್ನಡ (Uttara kannada) ಜಿಲ್ಲೆಯ ಕಾರವಾರ(karwar) ತಾಲೂಕಿನ ಅಮದಳ್ಳಿಯ ಟೋಲ್ನಾಕಾದಲ್ಲಿ ನಡೆದಿದೆ.
ಜಿತೆಂದ್ರ ಜಗದೀಶ ಪಡ್ತಿ (20), ಆತ್ಮಹತ್ಯೆ ಮಾಡಿಕೊಂಡ ಯುವಕನಾಗಿದ್ದಾನೆ. ವಿದ್ಯಾಭ್ಯಾಸದಲ್ಲಿ ಚುರುಕಾಗಿದ್ದ ಈತ ಇತ್ತೀಚೆಗೆ ಸಿಇಟಿ ಪರೀಕ್ಷೆಯಲ್ಲಿ ಜಿಲ್ಲೆಗೆ ದ್ವಿತೀಯ ಸ್ಥಾನ ಗಳಿಸಿದ್ದನು. ಕಾಲೇಜಿನಲ್ಲಿ ಈತ ಯುವತಿಯೋರ್ವಳನ್ನು ಪ್ರೀತಿಸುತಿದ್ದು ಪ್ರೇಮ ನಿವೇದನೆ ಮಾಡಿದ್ದನು.ಆದರೇ ಆಕೆ ಆತನೊಂದಿಗೆ ಸ್ನೇಹದಲ್ಲಿ ಇದ್ದು ಪ್ರೀತಿಯನ್ನು ನಿರಾಕರಿಸಿದ್ದಳು. ಇನ್ನು ಆಕೆ ಹೆಚ್ಚಿನ ಓದಿಗಾಗಿ ಗೋವಾದಲ್ಲಿ ಇದ್ದಳು .
ಇದನ್ನೂ ಓದಿ:-Karwar:ಕೇಣಿ ವಾಣಿಜ್ಯ ಬಂದರಿಗಾಗಿ ಮೀನುಗಾರರಿಗೆ ಹಣದ ಅಮಿಷ ,ಸುಳ್ಳು ಪ್ರಚಾರ ವಿರೋಧಿಸಿದ ಮೀನುಗಾರರು
ಆದರೇ ಈತನ ಪ್ರೀತಿಯನ್ನು ಆಕೆ ನಿರಾಕರಿಸುತ್ತಾ ಬಂದಿದ್ದರಿಂದ ಇದರಿಂದ ಮನನೊಂದಿದ್ದ ಈತ ಆಕೆ ಮತ್ತು ಆಕೆಯ ಕುಟುಂಬದವರ ಹೆಸರು ಬರೆದಿಟ್ಟು ಮನೆಯಲ್ಲಿದ್ದವರು ಬೇರೆ ಕೆಲಸದಲ್ಲಿ ನಿರತರಾಗಿದ್ದ ವೇಳೆ ಮನೆಯ ಎರಡೂ ಬದಿಯಲ್ಲಿ ಬಾಗಿಲು ಹಾಕಿಕೊಂಡು ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ ಗೆ ಯತ್ನಿಸಿದ್ದನು.
ಮನೆಯಿಂದ ಬೆಂಕಿಯ ಹೊಗೆ ಬರುತ್ತಿರೋದನ್ನು ಗಮನಿಸಿದ ಯುವಕನ ಪೋಷಕರು ಕೂಡಲೇ ಆತನನ್ನು ರಕ್ಷಣೆ ಮಾಡಲು ಪ್ರಯತ್ನಿಸಿದ್ದು ಬಹುತೇಕ ಬೆಂಕಿಯಿಂದ ಸುಟ್ಟುಹೋಗಿದ್ದ ಆತನನ್ನು ಕಾರವಾರದ ಕ್ರಿಮ್ಸ್ ವೈದ್ಯಕೀಯ ಆಸ್ಪತ್ರೆಗೆ ದಾಖಲು ಮಾಡಿದ್ದರು .ಆದರೇ ಆತನ ದೇಹ ಶೇ .35 ಕ್ಕೂ ಹೆಚ್ಚು ಸುಟ್ಟಿದ್ದರಿಂದ ಆತ ಚಿಕಿತ್ಸೆ ಫಲಕಾರಿಯಾಗದೇ ಸಾವು ಕಂಡಿದ್ದಾನೆ.
ಘಟನೆ ಸಂಬಂಧ ಕಾರವಾರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
