For the best experience, open
https://m.kannadavani.news
on your mobile browser.
Advertisement

Bhatkal: ಮಳೆ ಅಬ್ಬರ ಮುರುಡೇಶ್ವರದಲ್ಲಿ ಕಡಲ ತೀರಕ್ಕೆ ನಿಷೇಧ ,ಮುಟ್ಟಳ್ಳಿಯಲ್ಲಿ ಎಂಟು ಕುಟುಂಬಗಳ ಸ್ಥಳಾಂತರ 

ಕಾರವಾರ:- ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರೆದಿದ್ದು ,ಜೂ.26 ರ ವರೆಗೂ ಕರಾವಳಿಯಲ್ಲಿ ಹೆಚ್ಚಿನ ಮಳೆಯಾಗುವ ಸೂಚನೆ ನೀಡಿದೆ.
02:41 PM Jun 22, 2025 IST | ಶುಭಸಾಗರ್
ಕಾರವಾರ:- ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರೆದಿದ್ದು ,ಜೂ.26 ರ ವರೆಗೂ ಕರಾವಳಿಯಲ್ಲಿ ಹೆಚ್ಚಿನ ಮಳೆಯಾಗುವ ಸೂಚನೆ ನೀಡಿದೆ.
bhatkal  ಮಳೆ ಅಬ್ಬರ ಮುರುಡೇಶ್ವರದಲ್ಲಿ ಕಡಲ ತೀರಕ್ಕೆ ನಿಷೇಧ  ಮುಟ್ಟಳ್ಳಿಯಲ್ಲಿ ಎಂಟು ಕುಟುಂಬಗಳ ಸ್ಥಳಾಂತರ 

Bhatkal: ಮಳೆ ಅಬ್ಬರ ಮುರುಡೇಶ್ವರದಲ್ಲಿ ಕಡಲ ತೀರಕ್ಕೆ ನಿಷೇಧ ,ಮುಟ್ಟಳ್ಳಿಯಲ್ಲಿ ಎಂಟು ಕುಟುಂಬಗಳ ಸ್ಥಳಾಂತರ 

Advertisement

ಕಾರವಾರ:- ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರೆದಿದ್ದು ,ಜೂ.26 ರ ವರೆಗೂ ಕರಾವಳಿಯಲ್ಲಿ ಹೆಚ್ಚಿನ ಮಳೆಯಾಗುವ ಸೂಚನೆ ನೀಡಿದೆ.

ಇದರ ಬೆನ್ನಲ್ಲೇ ಹಲವು ಕಡೆ ಭೂ ಕುಸಿತವಾಗುವ ಸಾಧ್ಯತೆ ಹಿನ್ನಲೆಯಲ್ಲಿ ಜನವಸತಿ ಪ್ರದೇಶಗಳಲ್ಲಿ ಜನರ ಸ್ಥಳಾಂತರಕ್ಕೆ ಜಿಲ್ಲಾಡಳಿತ ಮುಂದಾಗಿದೆ.

ಭಟ್ಕಳ: ಭೂಕುಸಿತ ಭೀತಿ: 8 ಕುಟುಂಬಗಳಿಗೆ ಸ್ಥಳಾಂತರಗೊಳ್ಳಲು ನೋಟಿಸ್‌

ಭಟ್ಕಳದ ಮುಠಳ್ಳಿ ಗ್ರಾಮದಲ್ಲಿ ಭೂಕುಸಿತದ ಅಪಾಯ ಹೆಚ್ಚಿದ್ದು, ಬೆಟ್ಟದಂಚಿನ 8 ಕುಟುಂಬಗಳಿಗೆ ಸುರಕ್ಷತ ಸ್ಥಳಾಂತರಗೊಳ್ಳುವಂತೆ  ನೋಟಿಸ್ ಜಾರಿ ಮಾಡಲಾಗಿದೆ. ಮುಟ್ಟಳ್ಳಿ ಗ್ರಾ. ಪಂ. ಅಭಿವೃದ್ಧಿ ಅಧಿಕಾರಿ ರಾಜೇಶ್ವರಿ ಚಂದಾವರ ನೋಟೀಸ್ ಜಾರಿ ಮಾಡಿದ್ದಾರೆ. ಪ್ರದೇಶವು ವಾಸಕ್ಕೆ ಯೋಗ್ಯವಲ್ಲ ಎಂಬ ವರದಿಯ ಹಿನ್ನೆಲೆ ನೋಟಿಸ್ ನೀಡಲಾಗಿದೆ. ಆದರೆ, ಪರ್ಯಾಯ ವ್ಯವಸ್ಥೆಗಳಿಲ್ಲದೆ ಎಲ್ಲಿಗೆ ಹೋಗಬೇಕು ಎಂದು ಸ್ಥಳೀಯ ನಿವಾಸಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ:-Bhatkal :ನೀರು ಹೋಗಲು ಹೆದ್ದಾರಿಯಲ್ಲಿ ತೆಗೆದ ಗುಂಡಿಯಲ್ಲಿ ಬಿದ್ದ ವಾಹನ ಸವಾರರು! 

ಇನ್ನು ಸದ್ಯ ನೋಟಿಸ್ ನೀಡಿದ್ದರಿಂದ ಇದೀಗ ಜನರು ತಮ್ಮ ಸಂಬಂಧಿಗಳ ಮನೆಗೆ ಸ್ಥಳಾಂತರಗೊಳ್ಳುತಿದ್ದು, ಮಳೆ ಮುಗಿಯುವ ವರೆಗಾದರೂ ಜಿಲ್ಲಾಡಳಿತ ಪರ್ಯಾಯ ವ್ಯವಸ್ಥೆ ಮಾಡುವಂತೆ ಸ್ಥಳೀಯರು ಕೇಳಿಕೊಂಡಿದ್ದಾರೆ.

ಮುರುಡೇಶ್ವರ ಕಡಲ ತೀರಕ್ಕೆ ಪ್ರವಾಸಿಗರಿಗೆ ನಿಷೇಧ

ಮಳೆಗಾಲ ಪ್ರಾರಂಭದಲ್ಲೇ ಜಿಲ್ಲೆಯ ಪ್ರವಾಸಿ ಸ್ಥಳಗಳಲ್ಲಿ ಸಮುದ್ರಕ್ಕೆ ಇಳಿಯದಂತೆ ಜಿಲ್ಲಾಡಳಿತ ನಿರ್ಬಂಧ ವಿಧಿಸಿತ್ತು. ಆದರೇ ಭಟ್ಕಳದ ಮುರುಡೇಶ್ವರದಲ್ಲಿ ಪ್ರವಾಸಿಗರು ಹೆಚ್ಚು ಬರುತಿದ್ದು ನಿರ್ಬಂಧವಿದ್ದರೂ ಕಡಲಿಗಿಳಿಯುತಿದ್ದರು. ಈ ಹಿನ್ನಲೆಯಲ್ಲಿ ಜಿಲ್ಲಾಡಳಿತದ ನಿರ್ದೇಶನದ ಮೇರೆಗೆ ಪ್ರವಾಸೋದ್ಯಮ ಇಲಾಖೆ ಮತ್ತು ಗ್ರಾಮ ಪಂಚಾಯತ್ ಮಾವಳ್ಳಿ ಇವರ ಸಹಯೋಗದೊಂದಿಗೆ ಕಡಲ ತೀರದಲ್ಲಿ ಸೂಚನಾ ಫಲಕ ಅಳವಡಿಸಲಾಯಿತು. ಸೆಪ್ಟೆಂಬರ್ ಅಂತ್ಯದವರೆಗೂ ಕಡಲತೀರದಲ್ಲಿ ನಿಷೇಧ ಮುಂದುವರೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದ್ದು ,ಕಡಲ ತೀರದಲ್ಲಿ ಪೊಲೀಸರನ್ನು ಸಹ ನಿಯೋಜನೆ ಮಾಡಲಾಗಿದೆ.

ಗಾಳಿ ಮಳೆಯಿಂದ ಹೆಸ್ಕಾಂಗೆ 8 ಲಕ್ಷ ರೂ.

ಭಟ್ಕಳ ದಲ್ಲಿ ಬಿದ್ದ ವಿದ್ಯುತ್ ಕಂಬ

ಭಟ್ಕಳ ತಾಲೂಕಿನಲ್ಲಿ ಜೋರಾಗಿ ಬೀಸಿದ ಮಳೆಗಾಳಿಯ ರಭಸಕ್ಕೆ ವ್ಯಾಪಕ ಹಾನಿಯಾಗಿದೆ ಎಂದು ಹೆಸ್ಕಾಂ ಅಧಿಕಾರಿಗಳು ತಿಳಿಸಿದ್ದಾರೆ.

ಕಳೆದ ಮೂರ್ನಾಲ್ಕು ದಿನದಿಂದ  ಭೀಕರ ಬಿರುಗಾಳಿಯಿಂದಾಗಿ 18ಕ್ಕೂ ಅಧಿಕ ವಿದ್ಯುತ್ ಕಂಬಗಳು ಧರೆಗೆ ಉರುಳಿದ್ದು, ಸುಮಾರು 8 ಲಕ್ಷ ರೂಪಾಯಿಗೂ ಹೆಚ್ಚಿನ ಆರ್ಥಿಕ ನಷ್ಟ ಸಂಭವಿಸಿದೆ. ವಿದ್ಯುತ್ ಕಂಬಗಳು ಮುರಿದು ಬಿದ್ದ ಪರಿಣಾಮ ಹಲವೆಡೆ ವಿದ್ಯುತ್ ಕಡಿತಗೊಂಡಿದ್ದು, ಸ್ಥಳೀಯರಿಗೆ ತೊಂದರೆಯಾಗಿದೆ ,ಕಂಬಗಳನ್ನು ಸರಿಪಡಿಸುವ ಕಾರ್ಯ ಚಾಲ್ತಿಯಲ್ಲಿದೆ ಎಂದು ತಿಳಿಸಿದ್ದಾರೆ.

Advertisement
Tags :
Advertisement
Advertisement

.

tlbr_img1 ಹೋಮ್ tlbr_img2 ಟ್ರೆಂಡಿಂಗ್ tlbr_img3 ವಿಡಿಯೋ