Sirsi :ಕೂಲಿ ಹಣ ನೀಡದಕ್ಕೆ ಹೊಡೆದು ಹ**
Sirsi :ಕೂಲಿ ಹಣ ನೀಡದಕ್ಕೆ ಹೊಡೆದು ಹ**
ಕಾರವಾರ :- 200₹ ಕೂಲಿ ಹಣ ನೀಡಿಲ್ಲ ಎಂದು ಸಲಾಕೆಯಿಂದ ಹೊಡೆದು ಕೊ** ಮಾಡಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ (sirsi)ತಾಲೂಕಿನ ಕಮಾಟಗೇರಿಯಲ್ಲಿ ನಡೆದಿದೆ.

ಕಮಾಟಗೇರಿಯ ರವೀಶ ಗಣಪತಿ ಚನ್ನಯ್ಯ (40) ಕೊಲೆಯಾದ ವ್ಯಕ್ತಿಯಾಗಿದ್ದು ಕಮಾಟಗೇರಿಯ ಮಂಜುನಾಥ ಬಸ್ಯಾ ಚನ್ನಯ್ಯ ಕೊ***ಮಾಡಿದ ಆರೋಪಿಯಾಗಿದ್ದಾನೆ.
ನಿನ್ನೆ ದಿನ 200₹ಕೂಲಿ ಹಣ ಕ್ಕಾಗಿ ವಾದಿರಾಜ ಮಠದ ಕಮಾನಿನ ಬಳಿ ಇಬ್ಬರ ನಡುವೆ ವಾಗ್ವಾದವಾಗಿತ್ತು. ಸಿಟ್ಟಿನಲ್ಲಿ ರವೀಶ್ ಗಣಪತಿ ಚನ್ನಯ್ಯನಿಗೆ ಮಂಜುನಾಥ ಬಸ್ಯಾ ಕೆಲಸಕ್ಕಾಗಿ ತಂದಿದ್ದ ಗುದ್ದಲಿಯ ಸಲಾಕೆಯಿಂದ ಏಕಾ ಏಕಿ ತಲೆಗೆ ಹೊಡೆದಿದ್ದು ಗಂಭೀರ ಗಾಯದಿಂದ ರಕ್ತಸ್ರಾವವಾಗಿ ರವೀಶ ಗಣಪತಿ ಚನ್ನಯ್ಯ ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ಇದನ್ನೂ ಓದಿ:-Sirsi: ಅನಂತಕುಮಾರ್ ಹೆಗಡೆಗೆ ಹತ್ತಕ್ಕೂ ಹೆಚ್ಚು ಜೀವ ಬೆದರಿಕೆ? ಪ್ರಗತಿ ಕಾಣದ ತನಿಖೆ ಸುತ್ತಾ!
ಘಟನಾ ಸ್ಥಳಕ್ಕೆ ಡಿ.ವೈಎಸ್.ಪಿ ಗೀತಾ ಪಾಟಿಲ್,ಸಿಪಿಐ ಶಶಿಕಾಂತ ವರ್ಮಾ ಭೇಟಿ ನೀಡಿದ್ದು ಪರಿಶೀಲನೆ ನಡೆಸಿ ಮರಣೋತ್ತರ ಪರೀಕ್ಷೆಗೆ ಶಿರಸಿ ಪಂಡಿತ್ ಆಸ್ಪತ್ರೆಗೆ ಶವ ರವಾನೆ ಮಾಡಲಾಗಿದೆ. ಘಟನೆ ಸಂಬಂಧ ಶಿರಸಿ ಗ್ರಾಮೀಣ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.