Uttara kannada heavy rain|ಉತ್ತರ ಕನ್ನಡ ಜಿಲ್ಲೆಯಲ್ಲಿ ಅಬ್ಬರದ ಮಳೆ - ರಸ್ತೆ,ವಾಣಿಜ್ಯ ಸಂಕೀರ್ಣಗಳು ಜಲಾವೃತ -ಭೂಕುಸಿತ
ಉತ್ತರ ಕನ್ನಡ ಜಿಲ್ಲೆಯಲ್ಲಿ ಅಬ್ಬರದ ಮಳೆ - ರಸ್ತೆ,ವಾಣಿಜ್ಯ ಸಂಕೀರ್ಣಗಳು ಜಲಾವೃತ -ಭೂಕುಸಿತ.
ಕಾರವಾರ :-ಉತ್ತರಕನ್ನಡ ಜಿಲ್ಲೆಯಲ್ಲಿ ಅಬ್ಬರದ ಮಳೆ (rain)ಸುರಿಯುತಿದ್ದು ಹಲವು ಕಡೆ ಅವಾಂತರ ಸೃಷ್ಟಿ ಮಾಡಿದೆ.
ಕುಮಟಾ(kumta) ತಾಲೂಕಿನ ಗೋಕರ್ಣ,ಮಾದನಗೇರಿಯಲ್ಲಿ ರಾಜ್ಯ ಹೆದ್ದಾರಿ 143 ರಲ್ಲಿ ಹೆಚ್ಚಿನ ಮೇಯಿಂದಾಗಿ ರಸ್ತೆ ಜಲಾವೃತವಾಗಿ ಹಲವು ವಾಣಿಜ್ಯ ಮಳಿಗೆಗಳಿಗೆ ನೀರು ಹೊಕ್ಕಿದ್ದು ನಷ್ಟ ತಂದೊಡ್ಡಿದೆ.ಇನ್ನು ಮಾದನಗೇರಿ,ಗೋಕರ್ಣ ಭಾಗದ ಸಂಚಾರದಲ್ಲಿ ವ್ಯತ್ಯಯವಾಗಿದ್ದು ಸವಾರರು ಪರದಾಡುವಂತಾಗಿದೆ.
ಇದನ್ನೂ ಓದಿ:-Holiday| ಉತ್ತರ ಕನ್ನಡ ,ಶಿವಮೊಗ್ಗ ಜಿಲ್ಲೆಯ ಈ ತಾಲೂಕಿನ ಶಾಲೆ,ಅಂಗನವಾಡಿಗಳಿಗೆ ರಜೆ ಘೋಷಣೆ
ಹೊನ್ನಾವರದಲ್ಲಿ (honnavar)ಲಿಂಗನಮಕ್ಕಿ ಹಾಗೂ ಗೇರುಸೊಪ್ಪದ ಜಲಾಶಯದಿಂದ ನೀರು ಹೊರಬಿಟ್ಟ ಪರಿಣಾಮ ನದಿ ಪಾತ್ರದ ತೋಟಗಳಿಗೆ ನೀರು ನುಗ್ಗಿದೆ.ಹೊನ್ನಾವರದ ಕರ್ನಲ್ ಕಂಬದ ಸಮೀಪ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಗುಡ್ಡದಲ್ಲಿ ಸಣ್ಣ ಪ್ರಮಾಣದ ಗುಡ್ಡ ಕುಸಿದು ರಸ್ತೆಗೆ ಬಿದ್ದ ಪರಿಣಾಮ ಕೆಲವು ಕಾಲ ಸಂಚಾರಕ್ಕೆ ಅಡಚಣೆಯಾಗಿತ್ತು.ಇನ್ನು ಕಾರವಾರದಲ್ಲಿ ಸುರಿದ ಮಳೆಗೆ ಕೋಡಿಬಾಗ್ ನ ವಿಜಯಾ ಪಾಲೇಕರ್ ಎಂಬುವವರ ಮನೆಯ ಗೋಡೆ ಕುಸಿತವಾಗಿ ಹಾನಿಯಾಗಿದೆ.
ಮಳೆ ಹಾನಿಯ ಚಿತ್ರಗಳು:-