Uttara kannada| ಇಂದು ಎಲ್ಲಿ ಏನು ಸುದ್ದಿ|ವಿವರ ನೋಡಿ
ಉತ್ತರ ಕನ್ನಡ (uttara Kannada) ಜಿಲ್ಲೆಯ ಆಗಸ್ಟ್ 12 ರಂದು ಜಿಲ್ಲೆಯ ಪ್ರಮುಖ ಸುದ್ದಿಗಳ ಒಳನೋಡ ಇಲ್ಲಿದೆ.
ಉತ್ತರ ಕನ್ನಡ ಮೂರು ತಿಂಗಳಲ್ಲಿ 86 ಮಟ್ಕ ಪ್ರಕರಣದಲ್ಲಿ 101 ಆರೋಪಿಗಳ ಬಂಧನ.
ಕಾರವಾರ:- ಜಿಲ್ಲೆಯಲ್ಲಿ ಅನಧಿಕೃತ ಲಾಟರಿ ಮತ್ತು ಮಟ್ಕಾ ಹಾವಳಿ ಹಾಗೂ ಬೆಟ್ಟಿಂಗ್ ಪ್ರಕರಣಗಳನ್ನು ನಿಯಂತ್ರಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಉತ್ತರ ಕನ್ನಡ (uttara Kannada) ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ದೀಪನ್ ಎಂ.ಎನ್ ಹೇಳಿದರು.
ಅವರು ಮಂಗಳವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಅನಧಿಕೃತ ಲಾಟರಿ ಹಾಗೂ ಮಟ್ಕಾ ಹಾವಳಿ ನಿಯಂತ್ರಣ ಪ್ಲೈಯಿಂಗ್ ಸ್ಕಾಡ್ 2025-26 ನೇ ಸಾಲಿನ ಮೊದಲನೇ ತ್ರೈಮಾಸಿಕ ಸಭೆಯಲ್ಲಿ ಮಾತನಾಡಿದರು.
ಜಿಲ್ಲೆಯಲ್ಲಿ ಪ್ರಸಕ್ತ ತ್ರೈಮಾಸಿಕದಲ್ಲಿ ಒಟ್ಟು 86 ಮಟ್ಕಾ ಪ್ರಕರಣಗಳಲ್ಲಿ 101 ಆರೋಪಿಗಳ ಮೇಲೆ ಪ್ರಕರಣ ದಾಖಲಿಸಿದ್ದು, ಜಿಲ್ಲೆಯನ್ನು ಸಂಪೂರ್ಣ ಅನಧಿಕೃತ ಲಾಟರಿ/ಮಟ್ಕಾ ಹಾವಳಿ ಮುಕ್ತ ವಲಯವನ್ನಾಗಿ ಮಾಡಲು ಪ್ಲೈಯಿಂಗ್ ಸ್ಕಾಡ್ ಸದಸ್ಯರು ಅಗತ್ಯ ಕ್ರಮ ಕೈಗೊಳ್ಳಬೇಕು. ಅನಧಿಕೃತ ಲಾಟರಿ ಮತ್ತು ಮಟ್ಕಾ ಹಾವಳಿ ಹಾಗೂ ಬೆಟ್ಟಿಂಗ್ ಪ್ರಕರಣಗಳನ್ನು ನಿಯಂತ್ರಿಸಲು ಪೊಲೀಸ್ ಇಲಾಖೆ ವತಿಯಿಂದ ಅತ್ಯಂತ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಸಾಜಿದ ಅಹ್ಮದ ಮುಲ್ಲಾ, ಎ.ಎಸ್.ಪಿ ಕೃಷ್ಣಮೂರ್ತಿ, ವಾಣಿಜ್ಯ ತೆರಿಗೆ ಅಧಿಕಾರಿ ಷಣ್ಮುಗಪ್ಪ ನರೇಗಲ್, ಪ್ಲೈಯಿಂಗ್ ಸ್ಕಾಡ್ ಸದಸ್ಯ ಸಮಾವೇಶಕ ಹಾಗೂ ಪಿಂಚಣಿ ಇಲಾಖೆಯ ಸಹಾಯಕ ನಿರ್ದೇಶಕ ಗಣೇಶ ಪಟಗಾರ, ಅಭಿವೃದ್ಧಿ ಅಧಿಕಾರಿ ಕಾಶಿಮಸಾಬ ಮುಲ್ಲಾ, ಶೋಲಿನ್ ಡಿ ಕೋಸ್ಟಾ, ಮತ್ತಿತರರು ಉಪಸ್ಥಿತರಿದ್ದರು.
ಲೋಕ ಅದಾಲತ್ನಲ್ಲಿ ಕಳೆದ ಬಾರಿಗಿಂತ ಹೆಚ್ಚಿನ ಪ್ರಕರಣ ಇತ್ಯರ್ಥಪಡಿಸುವ ಗುರಿ: ನ್ಯಾ.ದಿವ್ಯಶ್ರೀ.
ಕಾರವಾರ:- ಜಿಲ್ಲೆಯಲ್ಲಿ ಸೆಪ್ಟಂಬರ್ 13 ರಂದು ನಡೆಯುವ ರಾಷ್ಟ್ರೀಯ ಲೋಕ ಅದಾಲತ್ನಲ್ಲಿ ರಾಜಿಯಾಗಬಹುದಾದ ಸಿವಿಲ್ ಮತ್ತು ಕ್ರಿಮಿನಲ್ ಪ್ರಕರಣಗಳನ್ನು ಕಳೆದ ಬಾರಿಗಿಂತ ಈ ಬಾರಿ ಹೆಚ್ಚು ಇತ್ಯರ್ಥಪಡಿಸುವ ಗುರಿ ಹೊಂದಲಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ದಿವ್ಯಶ್ರೀ ಸಿ.ಎಂ ಹೇಳಿದರು.
ಅವರು ಇಂದು ಜಿಲ್ಲಾ ನ್ಯಾಯಾಲಯದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.
ಜಿಲ್ಲೆಯಲ್ಲಿ ಪ್ರಸ್ತುತ ವಿವಿಧ ಹಂತದ ನ್ಯಾಯಾಲಯಗಳಲ್ಲಿ 38744 ಪ್ರಕರಣಗಳು ಬಾಕಿ ಇದ್ದು, ಇದರಲ್ಲಿ 5000 ಪ್ರಕರಣಗಳನ್ನು ಪಕ್ಷಗಾರರಿಗೆ ಹೊರೆಯಾಗದಂತೆ ಶೀಘ್ರವಾಗಿ ಇತ್ಯರ್ಥ ಮಾಡುವ ಗುರಿ ಹೊಂದಲಾಗಿದ್ದು, ಕಳೆದ ಬಾರಿ ನಡೆದ ಲೋಕ್ ಅದಾಲತ್ನಲ್ಲಿ 6263 ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದ್ದು, ಕಳೆದ ಬಾರಿಗಿಂತ ಈ ಬಾರಿ ಹೆಚ್ಚಿನ ಪ್ರಕರಣಗಳನ್ನು ಇತ್ಯರ್ಥ ಪಡಿಸುವ ಗುರಿ ಹೊಂದಲಾಗಿದೆ. ರಾಜ್ಯ ಮಟ್ಟದಲ್ಲಿ ಹಾಗೂ ವಲಯ ಮಟ್ಟದಲ್ಲಿ ಲೋಕ್ ಅದಾಲತ್ ಕುರಿತು ಸಭೆಗಳನ್ನು ನಡೆಸಲಾಗಿದ್ದು, ಪ್ರಕರಣಗಳನ್ನು ಶೀಘ್ರ ಇತ್ಯರ್ಥಕ್ಕೆ ಸಹಕರಿಸುವಂತೆ ಬ್ಯಾಂಕ್ ಮತ್ತು ವಿಮಾ ಕಂಪನಿಗಳಿಗೆ ಮಾಹಿತಿ ನೀಡಲಾಗಿದೆ ಎಂದರು.
ಜುಲೈ 1 ರಿಂದ ಅಕ್ಟೋಬರ್ 7 ರವರೆಗೆ ‘ವಿಶೇಷ ಮೀಡಿಯೇಶನ್ ಡ್ರೈವ್’ ದೇಶಕ್ಕಾಗಿ ಸಂಧಾನ ಎಂಬ ಧ್ಯೇಯದೊಂದಿಗೆ ವಿಶೇಷ ಸಂಧಾನದ ಅಭಿಯಾನ ನಡೆಸಲಾಗುತ್ತಿದ್ದು ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳನ್ನು ಸಂಧಾನದ ಮೂಲಕ ಇತ್ಯರ್ಥ ಗೊಳಿಸುವ ಪ್ರಯತ್ನ ನಡೆಸಲಾಗುತ್ತಿದೆ ಇದರಲ್ಲಿ ರಾಜಿ ಆಗಬಲ್ಲ ಸಿವಿಲ್ ಹಾಗೂ ಕ್ರಿಮಿನಲ್ ಪ್ರಕರಣಗಳು, ಆಸ್ತಿ ವಿಭಾಗದ ಪ್ರಕರಣಗಳು ಚೆಕ್ ಬೌನ್ಸ್ ಪ್ರಕರಣಗಳು ಹಾಗೂ ಕೌಟುಂಬಿಕ ಪ್ರಕರಣಗಳನ್ನು ಸಹ ಸಂಧಾನದ ಮೂಲಕ ಬಗೆಹರಿಸುವ ಪ್ರಯತ್ನ ನಡೆಸಲಾಗುತ್ತಿದ್ದು, ಇದುವರೆಗೆ 162 ಪ್ರಕರಣಗಳು ಬಂದಿದ್ದು, ಇದರಲ್ಲಿ 16 ಪ್ರಕರಣಗಳು ಇತ್ಯರ್ಥವಾಗಿದೆ ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದರು.
ಧಾರವಾಡ , ಉತ್ತರ ಕನ್ನಡ, ಕೊಪ್ಪಳ, ಬಳ್ಳಾರಿ, ದಾವಣಗೆರೆ, ಗದಗ ಮತ್ತು ಹಾವೇರಿ ಜಿಲ್ಲೆ ಸೇರಿದಂತೆ ಧಾರವಾಡದಲ್ಲಿ ಖಾಯಂ ಜನತಾ ನ್ಯಾಯಾಲಯವಿದೆ ಈ ನ್ಯಾಯಾಲಯ ಮುಖ್ಯವಾಗಿ ಸಾರ್ವಜನಿಕ ಉಪಯುಕ್ತ ಸೇವೆಗಳಿಗೆ ಸಂಬಂಧಪಟ್ಟಂತಹ ವಿವಾದಗಳನ್ನು ರಾಜೀ ಮತ್ತು ವಿಚಾರಣೆ ಮೂಕಲ ತೀರ್ಮಾನ ಮಾಡುವ ಅಧಿಕಾರ ಹೊಂದಿದೆ ಎಂದರು.
ಅಂಚೆ, ತಂತಿ, ದೂರವಾಣಿ ಸೇವೆಗಳು, ವಿದ್ಯುತ್, ಬೆಳಕು, ನೀರು ಸರಬರಾಜು ಮಾಡುವ ಯಾವುದೇ ಸಂಸ್ಥೆಗಳ ಸೇವೆಗಳು, ಸಾರ್ವಜನಿಕ ನೈರ್ಮಲ್ಯ ವ್ಯವಸ್ಥೆ, ಚರಂಡಿ ವ್ಯವಸ್ಥೆಯ ಕಾರ್ಯಗಳು, ವಿಮಾ ಸೇವೆಗಳು ಆಸ್ಪತ್ರೆ ಅಥವಾ ಔಷಧಾಲಯಗಳ ಸೇವೆಗಳು ಇನ್ನೂ ಹಲವಾರು ವಿಭಾಗಕ್ಕೆ ಸಂಬಂಧ ಪ್ರಕರಣಗಳನ್ನು ಯಾವುದೇ ನ್ಯಾಯಾಲಯದ ಶುಲ್ಕವಿಲ್ಲದೇ ಖಾಯಂ ಜನತಾ ನ್ಯಾಯಾಲಯದಲ್ಲಿ ಪ್ರಕರಣಗಳನ್ನು ಬಗೆಹರಿಸಿಕೊಳ್ಳಬಹುದು ಎಂದರು.
ಖಾಯಂ ನ್ಯಾಯಾಲಯದಲ್ಲಿ ಶುಲ್ಕ ನೀಡದೇ ಪ್ರಕರಣ ದಾಖಲಿಸಿ ಡಿಕ್ರಿ (ಅವಾರ್ಡ) ಪಡೆದುಕೊಳ್ಳಬಹುದು ಆ ಆವಾರ್ಡ್ನ್ನು ಸಂಬಂಧಪಟ್ಟ ನ್ಯಾಯಾಲಯಲ್ಲಿ ಅದನ್ನು ಜಾರಿಗೆ ತರಬಹುದು. ಇದು ಸಿವಿಲ್ ಡಿಕ್ರಿಯಷ್ಟೇ ಖಾಯಂ ಜನತಾ ನ್ಯಾಯಾಲಯದ ಅರ್ವಾಡ ಅಧಿಕಾರ ಹೊಂದಿರುತ್ತದೆ. ಈ ನ್ಯಾಯಾಲಯದಲ್ಲಿ 1 ಕೋಟಿ ಮೌಲ್ಯದ ವ್ಯಾಜ್ಯಗಳ ಬಗೆ ಹರಿಸಿಕೊಳ್ಳಬಹುದು. ಎಲ್ಲರೂ ಅರ್ಜಿ ಸಲ್ಲಿಸಬಹದು ಇದಕ್ಕೆ ಆದಾಯದ ಮೀತಿ ಇಲ್ಲ ಸಾರ್ವಜನಿಕರಿಗೆ ಹೆಚ್ಚಿನ ಉಪಯುಕ್ತವಾಗಿದೆ. ಈ ಕುರಿತು ಕರ ಪತ್ರಗಳನ್ನು ವಿತರಿಸುವ ಮೂಲಕ ಸಾರ್ವಜನಿಕರಿಗೆ ಮಾಹಿತಿ ನೀಡಲಾಗುತ್ತಿದೆ ಎಂದರು.
ಅಹಿಂಸಾಧರ್ಮ ಪಾಲೆನೆ ಮಾಡುತ್ತಿರುವವರು ಕೊಲೆ ಮಾಡುವಷ್ಟು ಕ್ರೂರರಲ್ಲ- ಭಟ್ಟಾಕಲಂಕ ಭಟ್ಟಾರಕ ಪಟ್ಟಾಚಾರ್ಯ ವರ ಸ್ವಾಮೀಜಿ.
Sirsi news :ಧರ್ಮಸ್ಥಳದಲ್ಲಿ ಹೆಗಡೆ ಪರಿವಾರವನ್ನು ಗುರಿಯನ್ನಾಗಿಸಿ ಕೆಲವು ಅತೃಪ್ತರು ತಪ್ಪು ಹೇಳಿಕೆ ನೀಡ್ತಿದ್ದಾರೆ,ಅಹಿಂಸಾ ಧರ್ಮವನ್ನು ಪಾಲನೆ ಮಾಡ್ತಿರುವವರು ಕೊಲೆಗಳನ್ನು ಮಾಡುವಂತಹ ಕ್ರೂರರಲ್ಲ ಎಂದು ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಸೋಂದಾ ಜೈನ ಮಠದ ಜಗದ್ಗುರು ಸ್ವಸ್ತಿ ಶ್ರೀ ಭಟ್ಟಾಕಲಂಕ ಭಟ್ಟಾರಕ ಪಟ್ಟಾಚಾರ್ಯ ವರ ಸ್ವಾಮೀಜಿ ಪ್ರತಿಕ್ರಿಯಿಸಿದ್ದಾರೆ. ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿದ ಅವರು ಯಾರನ್ನೂ ಮನಸ್ಸಲ್ಲಿ ದ್ವೇಷ ಮಾಡದವರು ಕೊಲೆಗಳನ್ನು ಮಾಡಲಿಳಿಯಲ್ಲ,ಕರ್ನಾಟಕ ಸರಕಾರ ಸ್ಪಂದಿಸಿ ಎಸ್ಐಟಿಗೆ ಸಂಪೂರ್ಣ ತನಿಖೆಯ ಜವಾಬ್ದಾರಿ ವಹಿಸಿಕೊಡಲಾಗಿದೆ,ಎಸ್ಐಟಿ ತನಿಖೆ ನಿಷ್ಪಕ್ಷಪಾತವಾಗಿ ನಡೆಯಬೇಕು, ಅವರಿಗೆ ಯಾವುದೇ ಒತ್ತಡ ಬರಬಾರದು
ತನಿಖೆ ನಡೆಯೋವಾಗ ಯಾರೂ ಮಾತನಾಡಬಾರದು, ಇಲ್ಲಿ ನಾವೇ ತೀರ್ಪು ಕೊಡೋದಲ್ಲ ತನಿಖೆಯ ಬಳಿಕ ನ್ಯಾಯಾಂಗ ಯಾವ ತೀರ್ಪು ನೀಡುತ್ತೆ, ಅದನ್ನು ಸ್ವಾಗತಿಸುತ್ತೇವೆ.ಹೆಗಡೆ ಪರಿವಾರದ ಮನೋಸ್ಥೈರ್ಯ ಹೆಚ್ಚಾಗಲಿ ಎಂದು ದೇವತೆಗಳಲ್ಲಿ ಪ್ರಾರ್ಥನೆ ಮಾಡುತ್ತೇವೆ.ಶ್ರೀ ಕ್ಷೇತ್ರ ಯಾವಾಗಲೂ ಹೆಗಡೆ ಪರಿವಾರದ ಜೊತೆಯಿದೆ, ಮುಂದಿನ ದಿನಗಳಲ್ಲಿ ಸುಖದಿಂದ ಇರಲು ಪ್ರಾರ್ಥಿಸ್ತೇವೆ ಎಂದರು.