ಪ್ರಮುಖ ಸುದ್ದಿಮುಖಪುಟLocal storyರಾಜ್ಯರಾಷ್ಟ್ರೀಯಅಂತರರಾಷ್ಟ್ರೀಯCrime newsಮನೋರಂಜನೆ
Advertisement

News Impact :ವಿದ್ಯಾರ್ಥಿಗೆ ಬಾಸುಂಡೆ ಬರುವಂತೆ ಹೊಡೆತ ಶಿಕ್ಷಕಿ ಅಮಾನತು

ಮುಂಡಗೋಡ ತಾಲೂಕಿನ ಕಾಳಗನಕೊಪ್ಪ ಸರಕಾರಿ ಶಾಲೆಯಲ್ಲಿ ಸರಿಯಾಗಿ ಬರೆಯುವುದಿಲ್ಲ, ಕಲಿಸಿರೋದನ್ನು ಮನನ ಮಾಡಿಕೊಳ್ಳುವುದಿಲ್ಲ ಎಂದು ಸಿಟ್ಟಿಗೆದ್ದು ಶಿಕ್ಷಕಿ ಎರಡನೇ ತರಗತಿ ವಿದ್ಯಾರ್ಥಿಗೆ ಕೋಲಿನಿಂದ ಹೊಡೆದಿದ್ದು ಈ ಕುರಿತು ಕನ್ನಡವಾಣಿ ವರದಿ ಪ್ರಸಾರವಾಗುತಿದ್ದಂತೆ ಶಿಕ್ಷಣ ಇಲಾಖೆ ಶಿಕ್ಷಕಿ ಭಾರತಿ ನಾಯ್ಕ್‌ರನ್ನ ಅಮಾನತು ಮಾಡಿದೆ.
10:23 PM Aug 08, 2025 IST | ಶುಭಸಾಗರ್
ಮುಂಡಗೋಡ ತಾಲೂಕಿನ ಕಾಳಗನಕೊಪ್ಪ ಸರಕಾರಿ ಶಾಲೆಯಲ್ಲಿ ಸರಿಯಾಗಿ ಬರೆಯುವುದಿಲ್ಲ, ಕಲಿಸಿರೋದನ್ನು ಮನನ ಮಾಡಿಕೊಳ್ಳುವುದಿಲ್ಲ ಎಂದು ಸಿಟ್ಟಿಗೆದ್ದು ಶಿಕ್ಷಕಿ ಎರಡನೇ ತರಗತಿ ವಿದ್ಯಾರ್ಥಿಗೆ ಕೋಲಿನಿಂದ ಹೊಡೆದಿದ್ದು ಈ ಕುರಿತು ಕನ್ನಡವಾಣಿ ವರದಿ ಪ್ರಸಾರವಾಗುತಿದ್ದಂತೆ ಶಿಕ್ಷಣ ಇಲಾಖೆ ಶಿಕ್ಷಕಿ ಭಾರತಿ ನಾಯ್ಕ್‌ರನ್ನ ಅಮಾನತು ಮಾಡಿದೆ.

News Impact :ವಿದ್ಯಾರ್ಥಿಗೆ ಬಾಸುಂಡೆ ಬರುವಂತೆ ಹೊಡೆತ ಶಿಕ್ಷಕಿ ಅಮಾನತು

Advertisement

ಮುಂಡಗೋಡ ತಾಲೂಕಿನ ಕಾಳಗನಕೊಪ್ಪ ಸರಕಾರಿ ಶಾಲೆಯಲ್ಲಿ ಸರಿಯಾಗಿ ಬರೆಯುವುದಿಲ್ಲ, ಕಲಿಸಿರೋದನ್ನು ಮನನ ಮಾಡಿಕೊಳ್ಳುವುದಿಲ್ಲ ಎಂದು ಸಿಟ್ಟಿಗೆದ್ದು ಶಿಕ್ಷಕಿ ಎರಡನೇ ತರಗತಿ ವಿದ್ಯಾರ್ಥಿಗೆ ಕೋಲಿನಿಂದ ಹೊಡೆದಿದ್ದು ಈ ಕುರಿತು ಕನ್ನಡವಾಣಿ ವರದಿ ಪ್ರಸಾರವಾಗುತಿದ್ದಂತೆ ಶಿಕ್ಷಣ ಇಲಾಖೆ ಶಿಕ್ಷಕಿ ಭಾರತಿ ನಾಯ್ಕ್‌ರನ್ನ ಅಮಾನತು ಮಾಡಿದೆ.

ಮುಂಡಗೋಡ ತಾಲೂಕಿನ ಕಾಳಗನಕೊಪ್ಪ ಸರಕಾರಿ ಶಾಲೆಯಲ್ಲಿ ನಿನ್ನೆ ನಡೆದಿದ್ದ ಈ ಘಟನೆ ಎಂತವರನ್ನೂ ನೋವು ತರಿಸುವಂತಿತ್ತು.

ಇದನ್ನೂ ಓದಿ:-Mundgod: ವಿದ್ಯಾರ್ಥಿ ಪಾಠ ಕಲಿಯಲಿಲ್ಲ ,ಶಿಕ್ಷಕಿ ಹೊಡೆತಕ್ಕೆ ಮೈಯೆಲ್ಲಾ ಬಾಸುಂಡೆ!

Advertisement

ಬೆನ್ನಮೇಲೆ ಬಾಸುಂಡೆ ಬರುವಂತೆ ಶಿಕ್ಷಕಿ ಥಳಿಸಿದ್ದರು. ಈ ಪ್ರಕರಣದಲ್ಲಿ ಶಿಕ್ಷಕಿಯನ್ನು ಇಂದು ಅಮಾನತು ಮಾಡಲಾಗಿದೆ.

ಘಟನೆ ಏನಾಗಿತ್ತು?

ಎರಡನೇ ತರಗತಿ ಓದುತ್ತಿರುವ ಬಾಲಕನಿಗೆ, ಬೆನ್ನಿನ ಮೇಲೆ ಬಾಸುಂಡೆ ಮೂಡುವ ಹಾಗೆ ಭಾರತಿ ನಾಯ್ಕ ಎಂಬ  ಶಿಕ್ಷಕಿಯೊಬ್ಬರು ಹೊಡೆದಿದ್ದರು.

ಸರಿಯಾಗಿ ಬರೆಯುವುದಿಲ್ಲ, ಕಲಿಸಿರೋದನ್ನು ಮನನ ಮಾಡಿಕೊಳ್ಳುವುದಿಲ್ಲ ಎಂದು ಸಿಟ್ಟಿಗೆದ್ದು ಶಿಕ್ಷಕಿಯು ವಿದ್ಯಾರ್ಥಿಗೆ  ಕೋಲಿನಿಂದ ಹೊಡೆದಿದ್ದಾರೆ.

ಶಾಲೆ ಬಿಟ್ಟ ನಂತರ ಮನೆಗೆ ಹೋದ ಬಾಲಕ, ಮನೆಯಲ್ಲಿ ನೋವು ತಡೆದುಕೊಳ್ಳಲಾರದೇ ಅಳಲು ಆರಂಭಿಸಿದ್ದಾನೆ. ಮನೆಯವರು ಮೈಮೇಲಿನ ಶರ್ಟ್‌ ಬಿಚ್ಚಿ ನೋಡಿದಾಗ ಬಾಸುಂಡೆಗಳು ಮೂಡಿರುವುದು ಕಂಡುಬಂದಿದೆ.

ಬಾಲಕನ ತಾಯಿ, ಗ್ರಾಮದ ಪ್ರಮುಖರಲ್ಲಿ ತಮ್ಮ ಮಗನಿಗೆ, ಶಿಕ್ಷಕಿ ಹೊಡೆದಿರುವುದನ್ನು ತೋರಿಸಿ ಕಣ್ಣೀರು ಹಾಕಿದ್ದಾರೆ. ಶಾಲೆ ಬಿಟ್ಟ ನಂತರ ಮಾಹಿತಿ ತಿಳಿಯುತ್ತಿದ್ದಂತೆ ಬಿಇಒ ಸುಮಾ ಜಿ. ಶಾಲೆಗೆ ಭೇಟಿ ನೀಡಿದ್ದು, ಬಾಲಕನ ಪಾಲಕರು ಹಾಗೂ ಶಿಕ್ಷಕಿಯ ಜತೆ ಮಾತನಾಡಿ ಘಟನೆಯ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ. ಈ ವೇಳೆ ಶಿಕ್ಷಕಿ, ತಾನು ಉದ್ದೇಶಪೂರ್ವಕವಾಗಿ ಬಾಲಕನಿಗೆ ಹೊಡೆದಿಲ್ಲ. ನನ್ನಿಂದ ತಪ್ಪಾಗಿದೆ. ಮುಂದೆ ಹೀಗಾಗದಂತೆ ನೋಡಿಕೊಳ್ಳುತ್ತೇನೆ ಎಂದು ಕಣ್ಣೀರು ಹಾಕಿದ್ದಾರೆ. ಶಿಕ್ಷಕಿಯ ಮಾತು ಕೇಳಿ ಬಿಇಒ ಸುಮಾ ಆಕೆಯ ಎಚ್ಚರಿಕೆ ನೀಡಿ ಕಳುಹಿಸಿದ್ದರು.ನಂತರ ಬಾಲಕನನ್ನು ಮುಂಡಗೋಡದ ತಾಲೂಕು ಆಸ್ಪತ್ರೆಗೆ ದಾಖಲಿಸಿ, ಪ್ರಥಮ ಚಿಕಿತ್ಸೆ ಕೊಡಿಸಲಾಯಿತು. ಶಾಲಾಭಿವೃದ್ಧಿ ಸಮಿತಿಯವರು ಹಾಗೂ ಬಾಲಕನ ಕುಟುಂಬಸ್ಥರು ಪೊಲೀಸ್‌ ಠಾಣೆಗೆ ತೆರಳಿ ನಂತರ ದೂರು ದಾಖಲಿಸಿದ್ದರು.

 

Advertisement
Tags :
kannada neesKarnatakaMundgodSchoolstudent beetimgteacher suspended
Advertisement
Next Article
Advertisement