ಪ್ರಮುಖ ಸುದ್ದಿಮುಖಪುಟLocal storyರಾಜ್ಯರಾಷ್ಟ್ರೀಯಅಂತರರಾಷ್ಟ್ರೀಯCrime newsಮನೋರಂಜನೆ
Advertisement

Rain news| ಉತ್ತರ ಕನ್ನಡ ಕಡಲ ಮಕ್ಕಳಿಗೆ ಎಚ್ಚರಿಕೆ ಶುಕ್ರವಾರ ಸಮುದ್ರಕ್ಕಿಳಿಯುವ ಮುಂಚೆ ಯೋಚಿಸಿ.

Rain news:-IMD issues orange alert for Uttara Kannada with heavy rain and strong winds till Oct 25. Fishermen and coastal residents warned to stay away from the sea.
11:08 PM Oct 23, 2025 IST | ಶುಭಸಾಗರ್
Rain news:-IMD issues orange alert for Uttara Kannada with heavy rain and strong winds till Oct 25. Fishermen and coastal residents warned to stay away from the sea.

Rain news| ಉತ್ತರ ಕನ್ನಡ ಕಡಲ ಮಕ್ಕಳಿಗೆ ಎಚ್ಚರಿಕೆ ಶುಕ್ರವಾರ ಸಮುದ್ರಕ್ಕಿಳಿಯುವ ಮುಂಚೆ ಯೋಚಿಸಿ.

Advertisement

Rain news(23 october 2025):- ಉತ್ತರ ಕನ್ನಡ ಜಿಲ್ಲೆ (uttara kannada )ಸೇರಿದಂತೆ ಹಲವು ಕಡೆ ಭಾರಿ ಹಾಗೂ ಮಧ್ಯಮ ಗಾತ್ರದ ಗಾಳಿ ಸಹಿತ ಮಳೆಯಾಗುವ ಸೂಚನೆಯನ್ನು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದ್ದು ,ಕರಾವಳಿಯಲ್ಲಿ ಆರೆಂಜ್ ಅಲರ್ಟ ನೀಡಲಾಗಿದೆ.

ಆರೆಂಜ್ ಅಲರ್ಟ್, ಮುನ್ನೆಚ್ಚರಿಕೆ ವಹಿಸಿ : ಜಿಲ್ಲಾಧಿಕಾರಿ

Advertisement

 ಆಗ್ನೇಯ ಅರಬ್ಬಿ ಸಮುದ್ರದ ಮೇಲೆ ವಾಯುಭಾರ ಕುಸಿತವಾಗಿದ್ದು , ನಿಧಾನವಾಗಿ ಈಶಾನ್ಯ ದಿಕ್ಕಿಗೆ ಚಲಿಸುತ್ತಿರುವ ಸಾಧ್ಯತೆಯ ಹಿನ್ನೆಲೆಯಲ್ಲಿ , ಉತ್ತರ ಕನ್ನಡ ಜಿಲ್ಲೆಗೆ ಅಕ್ಟೋಬರ್ 23 ರಿಂದ ಅಕ್ಟೋಬರ್ 25 ರ ಬೆಳಗ್ಗೆ 8.30 ರ ವರೆಗೆ ಆರೆಂಜ್ ಅಲರ್ಟ್ ಇರುವ ಬಗ್ಗೆ ಮುನ್ಸೂಚನೆ ನೀಡಲಾಗಿರುವುದರಿಂದ ಈ ಅವಧಿಯಲ್ಲಿ ಸಾರ್ವಜನಿಕರು ಈ ಮುಂದಿನ ಸೂಚನೆಗಳನ್ನು ಪಾಲಿಸುವಂತೆ ಉತ್ತರ ಕನ್ನಡ ಜಿಲ್ಲಾಧಿಕಾರಿ ಕೆ.ಲಕ್ಷ್ಮಿಪ್ರಿಯ ತಿಳಿಸಿದ್ದಾರೆ.

  ಭಾರತೀಯ ಹವಾಮಾನ ಇಲಾಖೆ/ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಬೆಂಗಳೂರು ರವರ ಮುನ್ಸೂಚನೆಯಂತೆ, 45 ರಿಂದ 55 ಕೀಮೀ ವೇಗದಲ್ಲಿ ಸಮುದ್ರ ತೀರದಲ್ಲಿ ಗಾಳಿ ಬೀಸುವ ಸಾದ್ಯತೆಯ ಹಿನ್ನೆಲೆಯಲ್ಲಿ , ಮಳೆಯ(rain) ಜೊತೆಗೆ ಗಾಳಿ ಕೂಡಾ 45-55 ಕಿ.ಮೀ ವೇಗದಿಂದ ಬೀಸುವ ಸಾಧ್ಯತೆಯಿರುವುದರಿಂದ ಅಪಾಯಕಾರಿ ಮರಗಳಿರುವ ಮನೆಗಳಲ್ಲಿಯ ಜನರು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಗೊಳ್ಳುವುದು ಮತ್ತು ಮರಗಳ ಕೆಳಗೆ ಆಶ್ರಯ ಪಡೆಯಬಾರದು.

ಶಿಥಿಲವಾದ ಕಟ್ಟಡದಲ್ಲಿ ವಾಸಿಸುತ್ತಿರುವವರು ಜನರು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಗೊಳ್ಳುವುದು. ಸಣ್ಣ ಹಾಗೂ ಮಧ್ಯಮ ದೋಣಿಗಳು ಮೀನುಗಾರಿಕೆಗೆ ಇಳಿಯಬಾರದು. ಈ ಬಗ್ಗೆ ಉಪನಿರ್ದೇಶಕರು ಮೀನುಗಾರಿಕೆ ಇಲಾಖೆ ರವರು ಎಲ್ಲಾ ಮೀನುಗಾರರಿಗೆ ತಿಳುವಳಿಕೆ ನೀಡಿ ಪ್ರಕಟಣೆಯನ್ನು ಜಾರಿಗೆ ತರುವುದು.

Karnataka|ಕೇದಾರನಾಥ ಧಾಮದಲ್ಲಿ ಮೊಳಗಿದ ಶರಾವತಿ ಪಂಪ್ ಸ್ಟೋರೇಜ್ ಯೋಜನೆಗೆ ವಿರೋಧ ಧ್ವನಿ

ಮೇಲಿನ ದಿನಗಳಲ್ಲಿ ಸಾರ್ವಜನಿಕರು ಹಾಗೂ ಮೀನುಗಾರರು ಸಮುದ್ರ ಪ್ರದೇಶಗಳಿಗೆ ಹೋಗಬಾರದು, ಪ್ರವಾಸಿಗರು, ಹಾಗೂ ಸಾರ್ವಜನಿಕರು ನದಿ/ನೀರಿರುವ ಪ್ರದೇಶ ಮತ್ತು ಸಮುದ್ರಕ್ಕೆ ಇಳಿಯದಂತೆ ಕಟ್ಟೆಚ್ಚರ ವಹಿಸಬೇಕು. ಸಮುದ್ರತೀರಕ್ಕೆ ಮಕ್ಕಳು ಹೋಗದಂತೆ ಪಾಲಕರು ಜಾಗ್ರತೆವಹಿಸಬೇಕು, ಸಮುದ್ರ ತೀರದಲ್ಲಿ ಯಾವುದೇ ಮನರಂಜನಾ ಚಟುವಟಿಕೆಗಳನ್ನು ಹಮ್ಮಿಕೊಳ್ಳಬಾರದೆಂದು ಸೂಚಿಸಲಾಗಿದೆ.

ತುರ್ತು ಸೇವೆಗಾಗಿ 24*7 ಕಂಟ್ರೋಲ್ ರೂಂ ಸಂಖ್ಯೆ 08382-229857, ವಾಟ್ಸಾಪ್ ಸಂಖ್ಯೆ. 9483511015 ಸಂಪರ್ಕಿಸುವoತೆ ಜಿಲ್ಲಾಧಿಕಾರಿಗಳು ಮತ್ತು ಅಧ್ಯಕ್ಷರು , ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಉತ್ತರ ಕನ್ನಡ ಜಿಲ್ಲೆ ಅವರ ಪ್ರಕಟಣೆ ತಿಳಿಸಿದೆ.

ಕಡಲ ಮಕ್ಕಳಿಗೆ ಎಚ್ಚರಿಕೆ!

ಭಾರತ ಹವಾಮಾನ ಇಲಾಖೆ ಮಾಹಿತಿಯಂತೆ ಕರ್ನಾಟಕದ  ಕರಾವಳಿಯಾದ್ಯಂತ 27 ಅಕ್ಟೋಬರ್ 2025ವರೆಗೆ ಗಾಳಿಯು ಗಂಟೆಗೆ 40-50ಕಿ.ಮೀ ವೇಗದಲ್ಲಿ, ಕೆಲವೊಮ್ಮೆ 60ಕಿಮೀ ವೇಗದಲ್ಲಿ ಬೀಸುವಸಾಧ್ಯತೆಯಿದೆ. ಹೀಗಾಗಿ ಕಡಲ ಮಕ್ಕಳು ಮೀನುಗಾರಿಕೆಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.

10% discount for Deepavali
And for orders more than 2499 rs 15% discount ( for Deepavali)
We also take birthday parties and family get together etc also
ಮನೆಗೆ ಚಂದದ ಪೀಟೋಪಕರಣಕ್ಕಾಗಿ ಭೇಟಿ ನೀಡಿ.
ಮಿಲನ್ ಎಂಟರ್ ಪ್ರೈಸಸ್ ನಲ್ಲಿ ದೀಪಾವಳಿ ಹಬ್ಬಕ್ಕೆ ವಿಶೇಷ ರಿಯಾಯಿತಿ ಮಾರಾಟ ,ಇಂದೇ ಭೇಟಿ ನೀಡಿ

 

Advertisement
Tags :
ArabianSeaCoastalKarnatakaCoastalSafetyDisasterManagementFishermenAlertHeavyRainIMDUpdatekarnatakaRainUpdateKarnatakaWeatherKarwarWeatherKLakshmipriyaOrangeAlertRainAlertRainNewsSeaWarningUttarakannadaWeatherNewsWindAlert
Advertisement
Next Article
Advertisement