BREAKING: ವಿವಾದ ಬೆನ್ನಲ್ಲೇ ಸರ್ಕಾರ ಮಹತ್ವದ ತೀರ್ಮಾನ| RSS ಚಟುವಟಿಕೆಗಳಿಗೆ ಬ್ರೇಕ್
Karnataka government bans RSS and private organizations from holding events at government venues without prior permission. CM Siddaramaiah-led cabinet takes major decision after Priyanka Kharge’s letter controversy.
07:51 PM Oct 16, 2025 IST | ಶುಭಸಾಗರ್
BREAKING: ವಿವಾದ ಬೆನ್ನಲ್ಲೇ ಸರ್ಕಾರ ಮಹತ್ವದ ತೀರ್ಮಾನ| RSS ಚಟುವಟಿಕೆಗಳಿಗೆ ಬ್ರೇಕ್
Advertisement

ಬೆಂಗಳೂರು (october 16):-ಸರ್ಕಾರದ ಸ್ಥಳಗಳಲ್ಲಿ RSS ಚಟುವಟಿಕೆಗಳಿಗೆ ರಾಜ್ಯ ಸರ್ಕಾರ ಬ್ರೇಕ್ ಹಾಕಿದೆ. ಇನ್ನು ಮುಂದೆ ರಾಜ್ಯದ ಸರ್ಕಾರಿ ಸ್ಥಳಗಳಲ್ಲಿ ಖಾಸಗಿ ಕಾರ್ಯಕ್ರಮಗಳನ್ನು ನಡೆಸಬೇಕಾದರೆ ಪೂರ್ವಾನುಮತಿ ಕಡ್ಡಾಯ.
RSS|ಸರ್ಕಾರಿ ಸ್ಥಳದಲ್ಲಿ RSS ಚಟುವಟಿಕೆ ನಿರ್ಬಂಧಿಸಲು ಪ್ರಿಯಾಂಕ ಖರ್ಗೆ ಪತ್ರ|ಪತ್ರದಲ್ಲಿ ಏನಿದೆ.
CM ಸಿದ್ದರಾಮಯ್ಯ ನೇತೃತ್ವದಲ್ಲಿ ಇಂದು ನಡೆದ ಕ್ಯಾಬಿನೆಟ್ ಸಭೆಯಲ್ಲಿ ಈ ಮಹತ್ವದ ತೀರ್ಮಾನ ತೆಗೆದುಕೊಳ್ಳಲಾಗಿದೆ. RSS ಮಾತ್ರವಲ್ಲ ಖಾಸಗಿ ಸಂಘ ಸಂಸ್ಥೆಗಳು /ಸಂಘಟನೆಗಳು ಸರ್ಕಾರಿ ಸ್ಥಳಗಳಲ್ಲಿ ಯಾರೇ ಯಾವುದೇ ಕಾರ್ಯಕ್ರಮ ಮಾಡುವುದಾದರೂ ಪೂರ್ವಾನುಮತಿ ಪಡೆಯಬೇಕಾಗುತ್ತದೆ.

ಪ್ರಿಯಾಂಕ ಖರ್ಗೆ ಬರೆದ ಪತ್ರದ ನಂತರ ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು. ಇದೀವ ಸರ್ಕಾರ ಈ ನಿರ್ಣಯ ಕೈಗೊಂಡಿದ್ದು ಮುಂದೆ ಯಾವ ಪರಿಣಾಮ ಬೀರಲಿದೆ ಎಂಬುದನ್ನು ಕಾದು ನೋಡಬೇಕಿದೆ.
Advertisement