For the best experience, open
https://m.kannadavani.news
on your mobile browser.
Advertisement

SIRSI ಮಾರಿಕಾಂಬಾ ದೇವಸ್ಥಾನಕ್ಕೆ ಬರುವ ಭಕ್ತರಿಗೆ ಇನ್ನುಮುಂದೆ ವಸ್ತ್ರ ಸಂಹಿತೆ ಜಾರಿ.

ಕಾರವಾರ :- ದಕ್ಷಿಣ ಭಾರತದ ಶಕ್ತಿ ಪೀಠ ದಲ್ಲಿ ಒಂದಾದ ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಮಾರಿಕಾಂಬ ದೇವಸ್ಥಾನದಲ್ಲಿ ವಸ್ತ್ರ ಸಂಹಿತಿ ಜಾರಿ ಮಾಡಿ ಆಡಳಿತ ಕಮಿಡಿ ಆದೇಶ ಮಾಡಿದೆ.
09:50 PM Oct 11, 2024 IST | ಶುಭಸಾಗರ್
sirsi ಮಾರಿಕಾಂಬಾ ದೇವಸ್ಥಾನಕ್ಕೆ ಬರುವ ಭಕ್ತರಿಗೆ ಇನ್ನುಮುಂದೆ ವಸ್ತ್ರ ಸಂಹಿತೆ ಜಾರಿ

SIRSI ಮಾರಿಕಾಂಬಾ ದೇವಸ್ಥಾನಕ್ಕೆ ಬರುವ ಭಕ್ತರಿಗೆ ಇನ್ನುಮುಂದೆ ವಸ್ತ್ರ ಸಂಹಿತೆ ಜಾರಿ.

Advertisement

ಕಾರವಾರ :- ದಕ್ಷಿಣ ಭಾರತದ ಶಕ್ತಿ ಪೀಠ ದಲ್ಲಿ ಒಂದಾದ ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಮಾರಿಕಾಂಬ ದೇವಸ್ಥಾನದಲ್ಲಿ ವಸ್ತ್ರ ಸಂಹಿತಿ ಜಾರಿ ಮಾಡಿ ಆಡಳಿತ ಕಮಿಡಿ ಆದೇಶ ಮಾಡಿದೆ.

ಭಾರತೀಯ ಸಂಸ್ಕೃತಿಗೆ ಅನುಗುಣವಾಗಿ ಉಡುಗೆ ತೊಡುಗೆ ಧರಿಸಿ ಬರಲು ಸೂಚನೆ ನೀಡಲಾಗಿದ್ದು ಈ ಸಂಬಂಧ ದೇವಸ್ಥಾನದ ಮುಖ್ಯ ದ್ವಾರದಲ್ಲಿ ಫಲಕ ಅಳವಡಿಸಲಾಗಿದೆ.

ಇದನ್ನೂ ಓದಿ:- Karnataka| ಮೊಬೈಲ್ ನಲ್ಲಿ ಪೊಲೀಸರಿಗೆ ದೂರು ನೀಡುವುದು ಹೇಗೆ? ವಿವರ ಇಲ್ಲಿದೆ.

ಈ ಹಿಂದೆ ಗೋಕರ್ಣ ಮಹಾಬಲೇಶ್ವರ ದೇವಸ್ಥಾನದಲ್ಲಿ ಸಹ ವಸ್ತ್ರ ಸಂಹಿತೆ ಜಾರಿ ಮಾಡಲಾಗಿದ್ದು ಇದೀಗ ಮಾರಿಕಾಂಬಾ ದೇವಸ್ಥಾನ ದಲ್ಲಿ ಸಹ ವಸ್ತ್ರ ಸಂಹಿತೆ ಜಾರಿ ಮಾಡಲಾಗಿದೆ.

ದೇಗುಲಗಳಲ್ಲಿ ಸಾಂಪ್ರದಾಯಿಕ ಉಡುಗೆ ತೊಟ್ಟು ದೇವರ ದರ್ಶನ ಪಡೆಯಬೇಕೆಂದು ಮುಜರಾಯಿ ಇಲಾಖೆ ಆದೇಶ ಮಾಡಿತ್ತು .

ಇದರ ಬೆನ್ನಲ್ಲೇ ರಾಜ್ಯ ವಿವಿಧ ದೇಗುಲಗಳ ಜತೆ ಶಿರಸಿಯಲ್ಲೂ ವಸ್ತ್ರಸಂಹಿತೆ ಕಡ್ಡಾಯ ಮಾಡಲಾಗಿದೆ.ನವರಾತ್ರಿಯ ಸಂದರ್ಭದಲ್ಲಿ ಭಕ್ತರು ಹೆಚ್ಚು ಬರುತಿದ್ದು ಈ ಸಂದರ್ಭದಲ್ಲೇ ಕ್ಷೇತ್ರದ ವತಿಯಿಂದ ಪ್ರವೇಶ ದ್ವಾರದ ಬಳಿ ಬೋರ್ಡ್ ಅಳವಡಿಕೆ ಮಾಡಲಾಗಿದೆ.

ಮುಂದಿನ ದಿನಗಳಲ್ಲಿ ಭಾರತೀಯ ಸಂಸ್ಕೃತಿಯ ಉಡುಗೆ ತೊಡುಗೆಗಳನ್ನು ಕಡ್ಡಾಯ ಮಾಡುವ ಉದ್ದೇಶ ವಿದೆ.

ಇದನ್ನೂ ಓದಿ:-Sirsi | ಕರ್ತವ್ಯದಲ್ಲಿ ಮದ್ಯ ಸೇವಿಸದ ಅಬಕಾರಿ ಚಾಲಕ| ಬುದ್ದಿ ಹೇಳಿದ ತಪ್ಪಿಗೆ ಆತ್ಮಹತ್ಯೆ ಬೆದರಿಕೆ

ದೇವಸ್ಥಾನ ಹೋಗುವಾಗ ಸಂಪ್ರದಾಯ ಪಾಲನೆ ಮಾಡಬೇಕೆಂಬ ಉದ್ದೇಶದಿಂದ ಆದೇಶ ಮಾಡಲಾಗಿದೆ.ಭಕ್ತರ ಸ್ಪಂದನೆ ಕೂಡಾ ಪರಿಗಣಿಸಿ ಮುಂದಿನ ಹೆಜ್ಜೆ ಇಡಲಾಗುತ್ತದೆ ಎಂದು ಶಿರಸಿ ದೇವಸ್ಥಾನ ಆಡಳಿತ ಮಂಡಳಿ ಅಧ್ಯಕ್ಷ ಆರ್.ಜಿ.ನಾಯ್ಕ್ ಮಾಹಿತಿ ನೀಡಿದ್ದಾರೆ.

Advertisement
Tags :
Advertisement
Advertisement

.

tlbr_img1 ಹೋಮ್ tlbr_img2 ಟ್ರೆಂಡಿಂಗ್ tlbr_img3 ವಿಡಿಯೋ